Advertisement
ರಾಜ್ಯ

ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಯಲ್ಲಿ 137.32 ಕೋಟಿ ರೂ. ಸಂಗ್ರಹ

Share

ಬೆಂಗಳೂರು: ರಾಜ್ಯದ ಪ್ರವಾಹ ಪರಿಸ್ಥಿತಿಗೆ ಸ್ಪಂದಿಸಿರುವ ನಾಡಿನ ಜನತೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾಕಷ್ಟು ಮಂದಿ ಸ್ವಯಂ ಸ್ಫೂರ್ತಿಯಿಂದ ದೇಣಿಗೆ ನೀಡುತ್ತಿದ್ದಾರೆ.
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿ ಖಾತೆಗೆ ಆ. 9 ರಿಂದ ಸೆ. 18 ರ ವರೆಗೆ 137.32 ಕೋಟಿ ರೂ. ದೇಣಿಗೆ ಸಂಗ್ರಹವಾಗಿದೆ.

ವಿವಿಧ ಸಂಘ, ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಸರಕಾರಿ ನೌಕರರು, ವಿವಿಧ ನಿಗಮ-ಮಂಡಳಿಗಳ ನೌಕರರು  ದೇಣಿಗೆ ನೀಡಿದ್ದು, ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 25 ಕೋಟಿ ರೂ., ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದ ಅಧ್ಯಕ್ಷೆ ಸುಧಾ ಮೂರ್ತಿ ಅವರು 10 ಕೋಟಿ ರೂ. ದೇಣಿಗೆ ನೀಡಿ ಇತರರಿಗೆ ಸ್ಫೂರ್ತಿಯಾಗಿದ್ದಾರೆ. ಅಂತೆಯೇ ಎನ್ಎಂಡಿಸಿ 10 ಕೋಟಿ ರೂ. , ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 5 ಕೋಟಿ ರೂ. ದೇಣಿಗೆ ನೀಡಿದ್ದಾರೆ. ರಾಜ್ಯ ಸರಕಾರೆಇ ನೌಕರರ ಸಂಘ, ನಿವೃತ್ತ ನೌಕರರ ಸಂಘಗಳು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಒಂದು ದಿನದ ವೇತನ ನೀಡುವುದಾಗಿ ವಾಗ್ದಾನ ಮಾಡಿವೆ. ನಿಗಮ, ಮಂಡಳಿಗಳು ಸಹ  ದೇಣಿಗೆ ನೀಡಿದ್ದಾರೆ.

ಉದ್ಯಮಿಗಳು, ಸೇವಾ ಸಂಸ್ಥೆಗಳು, ಸಾರ್ವಜನಿಕರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಂತ್ರಸ್ತರ ನೆರವಿಗೆ ದೇಣಿಗೆ ನೀಡುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ದೇಣಿಗ ನೀಡಲು ಬಯಸುವವರು, ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಈ ಕೆಳಕಂಡ ಬ್ಯಾಂಕ್ ಖಾತೆಗಳಿಗೆ ಆನ್ಲೈನ್ ನಲ್ಲಿ ದೇಣಿಗೆ ಜಮಾ ಮಾಡಬಹುದು. ಅಥವಾ ಚೆಕ್ ಅಥವಾ ಡಿಡಿ ಮೂಲಕವೂ ದೇಣಿಗೆ ನೀಡಬಹುದು.

Chief Minister’s Relief Fund (Natural Calamity)
Bank: State Bank of India,
Branch: Vidhanasoudha
A/C No. 37887098605
IFSC Code: SBIN0040277
MICR No: 56002419

Bank Name: HDFC Bank Ltd.
Branch: Seshadripuram, Bangalore
A/C No.: 50100309178784
IFSC Code: HDFC0000367
MICR Code: 560240018

ಇದಲ್ಲದೆ, https://cmrf.karnataka.gov.in ವೆಬ್ ಸೈಟ್ ಮೂಲಕ ಹಾಗೂ ಭೀಮ್, ಪೇಟಿಎಂ, ಫೋನ್ ಪೇ, ಗೂಗಲ್ ಪೇ ಮೊದಲಾದ ಯುಪಿಐ ಆಪ್ ಗಳ ಮೂಲಕವೂ ಹಣ ವರ್ಗಾಯಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

5 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

7 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

14 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

20 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago