Advertisement
ರಾಜ್ಯ

ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಯಲ್ಲಿ 137.32 ಕೋಟಿ ರೂ. ಸಂಗ್ರಹ

Share

ಬೆಂಗಳೂರು: ರಾಜ್ಯದ ಪ್ರವಾಹ ಪರಿಸ್ಥಿತಿಗೆ ಸ್ಪಂದಿಸಿರುವ ನಾಡಿನ ಜನತೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾಕಷ್ಟು ಮಂದಿ ಸ್ವಯಂ ಸ್ಫೂರ್ತಿಯಿಂದ ದೇಣಿಗೆ ನೀಡುತ್ತಿದ್ದಾರೆ.
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿ ಖಾತೆಗೆ ಆ. 9 ರಿಂದ ಸೆ. 18 ರ ವರೆಗೆ 137.32 ಕೋಟಿ ರೂ. ದೇಣಿಗೆ ಸಂಗ್ರಹವಾಗಿದೆ.

ವಿವಿಧ ಸಂಘ, ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಸರಕಾರಿ ನೌಕರರು, ವಿವಿಧ ನಿಗಮ-ಮಂಡಳಿಗಳ ನೌಕರರು  ದೇಣಿಗೆ ನೀಡಿದ್ದು, ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 25 ಕೋಟಿ ರೂ., ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದ ಅಧ್ಯಕ್ಷೆ ಸುಧಾ ಮೂರ್ತಿ ಅವರು 10 ಕೋಟಿ ರೂ. ದೇಣಿಗೆ ನೀಡಿ ಇತರರಿಗೆ ಸ್ಫೂರ್ತಿಯಾಗಿದ್ದಾರೆ. ಅಂತೆಯೇ ಎನ್ಎಂಡಿಸಿ 10 ಕೋಟಿ ರೂ. , ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 5 ಕೋಟಿ ರೂ. ದೇಣಿಗೆ ನೀಡಿದ್ದಾರೆ. ರಾಜ್ಯ ಸರಕಾರೆಇ ನೌಕರರ ಸಂಘ, ನಿವೃತ್ತ ನೌಕರರ ಸಂಘಗಳು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಒಂದು ದಿನದ ವೇತನ ನೀಡುವುದಾಗಿ ವಾಗ್ದಾನ ಮಾಡಿವೆ. ನಿಗಮ, ಮಂಡಳಿಗಳು ಸಹ  ದೇಣಿಗೆ ನೀಡಿದ್ದಾರೆ.

ಉದ್ಯಮಿಗಳು, ಸೇವಾ ಸಂಸ್ಥೆಗಳು, ಸಾರ್ವಜನಿಕರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಂತ್ರಸ್ತರ ನೆರವಿಗೆ ದೇಣಿಗೆ ನೀಡುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ದೇಣಿಗ ನೀಡಲು ಬಯಸುವವರು, ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಈ ಕೆಳಕಂಡ ಬ್ಯಾಂಕ್ ಖಾತೆಗಳಿಗೆ ಆನ್ಲೈನ್ ನಲ್ಲಿ ದೇಣಿಗೆ ಜಮಾ ಮಾಡಬಹುದು. ಅಥವಾ ಚೆಕ್ ಅಥವಾ ಡಿಡಿ ಮೂಲಕವೂ ದೇಣಿಗೆ ನೀಡಬಹುದು.

Chief Minister’s Relief Fund (Natural Calamity)
Bank: State Bank of India,
Branch: Vidhanasoudha
A/C No. 37887098605
IFSC Code: SBIN0040277
MICR No: 56002419

Bank Name: HDFC Bank Ltd.
Branch: Seshadripuram, Bangalore
A/C No.: 50100309178784
IFSC Code: HDFC0000367
MICR Code: 560240018

ಇದಲ್ಲದೆ, https://cmrf.karnataka.gov.in ವೆಬ್ ಸೈಟ್ ಮೂಲಕ ಹಾಗೂ ಭೀಮ್, ಪೇಟಿಎಂ, ಫೋನ್ ಪೇ, ಗೂಗಲ್ ಪೇ ಮೊದಲಾದ ಯುಪಿಐ ಆಪ್ ಗಳ ಮೂಲಕವೂ ಹಣ ವರ್ಗಾಯಿಸಬಹುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

3 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

11 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

11 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

12 hours ago