ಮುಗಿದ ಉಪಸಮರ: ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು?

December 5, 2019
9:57 PM

ಬೆಂಗಳೂರು: ಕರ್ನಾಟಕದ ಉಪಸಮರ ಮುಗಿದಿದ್ದು ಸಿ ವೋಟರ್ ಸಮೀಕ್ಷೆ ಬಿಜೆಪಿಗೆ ಮುನ್ನಡೆ ನೀಡಿದೆ. ಬಿಜೆಪಿ 9 ರಿಂದ 12 ಸ್ಥಾನದಲ್ಲಿ ಜಯ ಸಾಧಿಸಲಿದೆ ಎಂದು ಹೇಳಿದ್ದರೆ ಕಾಂಗ್ರೆಸ್ ಗೆ 3 ರಿಂದ 6 ಸ್ಥಾನ ದೊರೆಯಲಿದೆ ಎಂದು ಹೇಳಿದೆ.

ಜೆಡಿಎಸ್ 1 ಸ್ಥಾನದಲ್ಲಿ ಗೆಲ್ಲುವ ಸಾಧ್ಯತೆ ಇದೆ, ಪಕ್ಷೇತರ ಶೂನ್ಯ ಫಲಿತಾಂಶ ಬರಲಿದೆ ಎಂದು ಸಿ -ವೋಟರ್ ಸಮೀಕ್ಷೆ ಹೇಳಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜಡಿಎಸ್ ಪಕ್ಷಗಳು ಆಂತರಿಕವಾಗಿ ತಮ್ಮ ತಮ್ಮ ಸಮೀಕ್ಷೆ ಮಾಡಿವೆ. ಆಯಾ ಪಕ್ಷಗಳು ತಮ್ಮ ಕಾರ್ಯಕರ್ತರ ಮಾಹಿತಿ ಆಧಾರದ ಮೇಲೆ ಇಂತಿಷ್ಟು ಸ್ಥಾನ ಬರುವುದು ಎಂಬ ಲೆಕ್ಕಾಚಾರ ಮಾಡಿಕೊಂಡಿವೆ.

15 ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಡಿ.5ರಂದು ಮುಗಿದಿದೆ. ಡಿಸೆಂಬರ್ 9 ರಂದು ಫಲಿತಾಂಶ ಹೊರಬೀಳಲಿದ್ದು ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಅಳಿವು-ಉಳಿವು ಆ ಫಲಿತಾಂಶದ ಮೇಲೆ ನಿಂತಿದೆ.

ಉಪಚುನಾವಣೆ ನಡೆದಿರುವ ಕ್ಷೇತ್ರಗಳು :
1.ಗೋಕಾಕ್, 2.ಅಥಣಿ, 3.ಕಾಗವಾಡ (ಬೆಳಗಾವಿ), 4. ರಾಣೇಬೆನ್ನೂರು, 5. ಹಿರೇಕೆರೂರು (ಹಾವೇರಿ), 6. ಕೆ.ಆರ್.ಪುರಂ, 7.ಯಶವಂತಪುರ, 8. ಶಿವಾಜಿನಗರ, 9. ಮಾಹಾಲಕ್ಷ್ಮೀ ಲೇಔಟ್ (ಬೆಂಗಳೂರು), 10.ಯಲ್ಲಾಪುರ (ಉತ್ತರ ಕನ್ನಡ), 11. ಕೆ.ಆರ್.ಪೇಟೆ (ಮಂಡ್ಯ), 12. ಹುಣಸೂರು (ಮೈಸೂರು), 13. ಚಿಕ್ಕಬಳ್ಳಾಪುರ, 14. ಹೊಸಕೋಟೆ (ಬೆಂಗಳೂರು ಗ್ರಾಮಾಂತರ) ಹಾಗೂ 15. ವಿಜಯನಗರ (ಬಳ್ಳಾರಿ)

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ
March 15, 2025
7:00 AM
by: ದಿವ್ಯ ಮಹೇಶ್
ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |
March 14, 2025
11:36 PM
by: ದ ರೂರಲ್ ಮಿರರ್.ಕಾಂ
ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ
March 14, 2025
11:03 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ
March 14, 2025
10:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror