ಮುಗಿದ ಉಪಸಮರ: ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು?

Share

ಬೆಂಗಳೂರು: ಕರ್ನಾಟಕದ ಉಪಸಮರ ಮುಗಿದಿದ್ದು ಸಿ ವೋಟರ್ ಸಮೀಕ್ಷೆ ಬಿಜೆಪಿಗೆ ಮುನ್ನಡೆ ನೀಡಿದೆ. ಬಿಜೆಪಿ 9 ರಿಂದ 12 ಸ್ಥಾನದಲ್ಲಿ ಜಯ ಸಾಧಿಸಲಿದೆ ಎಂದು ಹೇಳಿದ್ದರೆ ಕಾಂಗ್ರೆಸ್ ಗೆ 3 ರಿಂದ 6 ಸ್ಥಾನ ದೊರೆಯಲಿದೆ ಎಂದು ಹೇಳಿದೆ.

ಜೆಡಿಎಸ್ 1 ಸ್ಥಾನದಲ್ಲಿ ಗೆಲ್ಲುವ ಸಾಧ್ಯತೆ ಇದೆ, ಪಕ್ಷೇತರ ಶೂನ್ಯ ಫಲಿತಾಂಶ ಬರಲಿದೆ ಎಂದು ಸಿ -ವೋಟರ್ ಸಮೀಕ್ಷೆ ಹೇಳಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜಡಿಎಸ್ ಪಕ್ಷಗಳು ಆಂತರಿಕವಾಗಿ ತಮ್ಮ ತಮ್ಮ ಸಮೀಕ್ಷೆ ಮಾಡಿವೆ. ಆಯಾ ಪಕ್ಷಗಳು ತಮ್ಮ ಕಾರ್ಯಕರ್ತರ ಮಾಹಿತಿ ಆಧಾರದ ಮೇಲೆ ಇಂತಿಷ್ಟು ಸ್ಥಾನ ಬರುವುದು ಎಂಬ ಲೆಕ್ಕಾಚಾರ ಮಾಡಿಕೊಂಡಿವೆ.

15 ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಡಿ.5ರಂದು ಮುಗಿದಿದೆ. ಡಿಸೆಂಬರ್ 9 ರಂದು ಫಲಿತಾಂಶ ಹೊರಬೀಳಲಿದ್ದು ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಅಳಿವು-ಉಳಿವು ಆ ಫಲಿತಾಂಶದ ಮೇಲೆ ನಿಂತಿದೆ.

ಉಪಚುನಾವಣೆ ನಡೆದಿರುವ ಕ್ಷೇತ್ರಗಳು :
1.ಗೋಕಾಕ್, 2.ಅಥಣಿ, 3.ಕಾಗವಾಡ (ಬೆಳಗಾವಿ), 4. ರಾಣೇಬೆನ್ನೂರು, 5. ಹಿರೇಕೆರೂರು (ಹಾವೇರಿ), 6. ಕೆ.ಆರ್.ಪುರಂ, 7.ಯಶವಂತಪುರ, 8. ಶಿವಾಜಿನಗರ, 9. ಮಾಹಾಲಕ್ಷ್ಮೀ ಲೇಔಟ್ (ಬೆಂಗಳೂರು), 10.ಯಲ್ಲಾಪುರ (ಉತ್ತರ ಕನ್ನಡ), 11. ಕೆ.ಆರ್.ಪೇಟೆ (ಮಂಡ್ಯ), 12. ಹುಣಸೂರು (ಮೈಸೂರು), 13. ಚಿಕ್ಕಬಳ್ಳಾಪುರ, 14. ಹೊಸಕೋಟೆ (ಬೆಂಗಳೂರು ಗ್ರಾಮಾಂತರ) ಹಾಗೂ 15. ವಿಜಯನಗರ (ಬಳ್ಳಾರಿ)

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

58 minutes ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

2 hours ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

2 hours ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

2 hours ago

ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು

ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…

3 hours ago

ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |

21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…

3 hours ago