ಬೆಂಗಳೂರು: ಕರ್ನಾಟಕದ ಉಪಸಮರ ಮುಗಿದಿದ್ದು ಸಿ ವೋಟರ್ ಸಮೀಕ್ಷೆ ಬಿಜೆಪಿಗೆ ಮುನ್ನಡೆ ನೀಡಿದೆ. ಬಿಜೆಪಿ 9 ರಿಂದ 12 ಸ್ಥಾನದಲ್ಲಿ ಜಯ ಸಾಧಿಸಲಿದೆ ಎಂದು ಹೇಳಿದ್ದರೆ ಕಾಂಗ್ರೆಸ್ ಗೆ 3 ರಿಂದ 6 ಸ್ಥಾನ ದೊರೆಯಲಿದೆ ಎಂದು ಹೇಳಿದೆ.
ಜೆಡಿಎಸ್ 1 ಸ್ಥಾನದಲ್ಲಿ ಗೆಲ್ಲುವ ಸಾಧ್ಯತೆ ಇದೆ, ಪಕ್ಷೇತರ ಶೂನ್ಯ ಫಲಿತಾಂಶ ಬರಲಿದೆ ಎಂದು ಸಿ -ವೋಟರ್ ಸಮೀಕ್ಷೆ ಹೇಳಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜಡಿಎಸ್ ಪಕ್ಷಗಳು ಆಂತರಿಕವಾಗಿ ತಮ್ಮ ತಮ್ಮ ಸಮೀಕ್ಷೆ ಮಾಡಿವೆ. ಆಯಾ ಪಕ್ಷಗಳು ತಮ್ಮ ಕಾರ್ಯಕರ್ತರ ಮಾಹಿತಿ ಆಧಾರದ ಮೇಲೆ ಇಂತಿಷ್ಟು ಸ್ಥಾನ ಬರುವುದು ಎಂಬ ಲೆಕ್ಕಾಚಾರ ಮಾಡಿಕೊಂಡಿವೆ.
15 ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಡಿ.5ರಂದು ಮುಗಿದಿದೆ. ಡಿಸೆಂಬರ್ 9 ರಂದು ಫಲಿತಾಂಶ ಹೊರಬೀಳಲಿದ್ದು ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಅಳಿವು-ಉಳಿವು ಆ ಫಲಿತಾಂಶದ ಮೇಲೆ ನಿಂತಿದೆ.
ಉಪಚುನಾವಣೆ ನಡೆದಿರುವ ಕ್ಷೇತ್ರಗಳು :
1.ಗೋಕಾಕ್, 2.ಅಥಣಿ, 3.ಕಾಗವಾಡ (ಬೆಳಗಾವಿ), 4. ರಾಣೇಬೆನ್ನೂರು, 5. ಹಿರೇಕೆರೂರು (ಹಾವೇರಿ), 6. ಕೆ.ಆರ್.ಪುರಂ, 7.ಯಶವಂತಪುರ, 8. ಶಿವಾಜಿನಗರ, 9. ಮಾಹಾಲಕ್ಷ್ಮೀ ಲೇಔಟ್ (ಬೆಂಗಳೂರು), 10.ಯಲ್ಲಾಪುರ (ಉತ್ತರ ಕನ್ನಡ), 11. ಕೆ.ಆರ್.ಪೇಟೆ (ಮಂಡ್ಯ), 12. ಹುಣಸೂರು (ಮೈಸೂರು), 13. ಚಿಕ್ಕಬಳ್ಳಾಪುರ, 14. ಹೊಸಕೋಟೆ (ಬೆಂಗಳೂರು ಗ್ರಾಮಾಂತರ) ಹಾಗೂ 15. ವಿಜಯನಗರ (ಬಳ್ಳಾರಿ)
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…