ಗುತ್ತಿಗಾರು: ಅಚ್ರಪ್ಪಾಡಿ ಕಿ.ಪ್ರಾ.ಶಾಲೆ ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆ ಅನುಭವಿಸಿ ಮುಚ್ಚುವ ಹಂತಕ್ಕೆ ತಲುಪಿತ್ತು. ಇದನ್ನು ಮನಗಂಡ ಊರವರು ಶಾಲೆಯನ್ನು ಉಳಿಸಲು ಪ್ರಯತ್ನಿಸಿ 7 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಇಂದು 21 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.
ಇದೀಗ ಶಾಲೆಗೆ ಕೊಡುಗೈ ದಾನಿಯಾಗಿರುವ ಸೀ ಫುಡ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಜಿ ಜಿ. ಇಬ್ರಾಹಿಂ ( ಉಂಬಾಯಿಚ್ಚ) ವಿದ್ಯಾರ್ಥಿಗಳಿಗೆ ಸುಮಾರು 12 ಸಾವಿರ ಮೌಲ್ಯದ ಪುಸ್ತಕ, ಬ್ಯಾಗ್,ಕೊಡೆ ಹಾಗೂ ಲೇಖನಿ ಸಾಮಾಗ್ರಿಗಳನ್ನು ಕೊಡುಗೆಗಯಾಗಿ ನೀಡಿದ್ದಾರೆ. ಇವರು ಹಲವಾರು ಶಾಲೆ , ಸಂಘಸಂಸ್ಥೆ, ಬಡವರಿಗೆ ಸಹಾಯ ಮಾಡಿ ಸೀ ಫುಡ್ ಉದ್ಯಮದ ಜತೆಗೆ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಶ್ವೇತಾ, ಗ್ರಾ.ಪಂ.ಸದಸ್ಯ ಶಿವಪ್ರಕಾಶ್ ಅಡ್ಡನಪಾರೆ, ಹರೀಶ್ ಅಡ್ಡನಪಾರೆ, ಎಸ್.ಡಿ.ಎಂ.ಸಿ. ಸದಸ್ಯೆ ಪ್ರಶಿತಾ ಶಿವಪ್ರಕಾಶ್ ಉಪಸ್ಥಿತರಿದ್ದರು.
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…