ಗುತ್ತಿಗಾರು: ಅಚ್ರಪ್ಪಾಡಿ ಕಿ.ಪ್ರಾ.ಶಾಲೆ ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆ ಅನುಭವಿಸಿ ಮುಚ್ಚುವ ಹಂತಕ್ಕೆ ತಲುಪಿತ್ತು. ಇದನ್ನು ಮನಗಂಡ ಊರವರು ಶಾಲೆಯನ್ನು ಉಳಿಸಲು ಪ್ರಯತ್ನಿಸಿ 7 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಇಂದು 21 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.
ಇದೀಗ ಶಾಲೆಗೆ ಕೊಡುಗೈ ದಾನಿಯಾಗಿರುವ ಸೀ ಫುಡ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಜಿ ಜಿ. ಇಬ್ರಾಹಿಂ ( ಉಂಬಾಯಿಚ್ಚ) ವಿದ್ಯಾರ್ಥಿಗಳಿಗೆ ಸುಮಾರು 12 ಸಾವಿರ ಮೌಲ್ಯದ ಪುಸ್ತಕ, ಬ್ಯಾಗ್,ಕೊಡೆ ಹಾಗೂ ಲೇಖನಿ ಸಾಮಾಗ್ರಿಗಳನ್ನು ಕೊಡುಗೆಗಯಾಗಿ ನೀಡಿದ್ದಾರೆ. ಇವರು ಹಲವಾರು ಶಾಲೆ , ಸಂಘಸಂಸ್ಥೆ, ಬಡವರಿಗೆ ಸಹಾಯ ಮಾಡಿ ಸೀ ಫುಡ್ ಉದ್ಯಮದ ಜತೆಗೆ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಶ್ವೇತಾ, ಗ್ರಾ.ಪಂ.ಸದಸ್ಯ ಶಿವಪ್ರಕಾಶ್ ಅಡ್ಡನಪಾರೆ, ಹರೀಶ್ ಅಡ್ಡನಪಾರೆ, ಎಸ್.ಡಿ.ಎಂ.ಸಿ. ಸದಸ್ಯೆ ಪ್ರಶಿತಾ ಶಿವಪ್ರಕಾಶ್ ಉಪಸ್ಥಿತರಿದ್ದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…