ಗುತ್ತಿಗಾರು: ಅಚ್ರಪ್ಪಾಡಿ ಕಿ.ಪ್ರಾ.ಶಾಲೆ ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆ ಅನುಭವಿಸಿ ಮುಚ್ಚುವ ಹಂತಕ್ಕೆ ತಲುಪಿತ್ತು. ಇದನ್ನು ಮನಗಂಡ ಊರವರು ಶಾಲೆಯನ್ನು ಉಳಿಸಲು ಪ್ರಯತ್ನಿಸಿ 7 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಇಂದು 21 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.
ಇದೀಗ ಶಾಲೆಗೆ ಕೊಡುಗೈ ದಾನಿಯಾಗಿರುವ ಸೀ ಫುಡ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಜಿ ಜಿ. ಇಬ್ರಾಹಿಂ ( ಉಂಬಾಯಿಚ್ಚ) ವಿದ್ಯಾರ್ಥಿಗಳಿಗೆ ಸುಮಾರು 12 ಸಾವಿರ ಮೌಲ್ಯದ ಪುಸ್ತಕ, ಬ್ಯಾಗ್,ಕೊಡೆ ಹಾಗೂ ಲೇಖನಿ ಸಾಮಾಗ್ರಿಗಳನ್ನು ಕೊಡುಗೆಗಯಾಗಿ ನೀಡಿದ್ದಾರೆ. ಇವರು ಹಲವಾರು ಶಾಲೆ , ಸಂಘಸಂಸ್ಥೆ, ಬಡವರಿಗೆ ಸಹಾಯ ಮಾಡಿ ಸೀ ಫುಡ್ ಉದ್ಯಮದ ಜತೆಗೆ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಶ್ವೇತಾ, ಗ್ರಾ.ಪಂ.ಸದಸ್ಯ ಶಿವಪ್ರಕಾಶ್ ಅಡ್ಡನಪಾರೆ, ಹರೀಶ್ ಅಡ್ಡನಪಾರೆ, ಎಸ್.ಡಿ.ಎಂ.ಸಿ. ಸದಸ್ಯೆ ಪ್ರಶಿತಾ ಶಿವಪ್ರಕಾಶ್ ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…