ಗುತ್ತಿಗಾರು: ಅಚ್ರಪ್ಪಾಡಿ ಕಿ.ಪ್ರಾ.ಶಾಲೆ ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆ ಅನುಭವಿಸಿ ಮುಚ್ಚುವ ಹಂತಕ್ಕೆ ತಲುಪಿತ್ತು. ಇದನ್ನು ಮನಗಂಡ ಊರವರು ಶಾಲೆಯನ್ನು ಉಳಿಸಲು ಪ್ರಯತ್ನಿಸಿ 7 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಇಂದು 21 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.
ಇದೀಗ ಶಾಲೆಗೆ ಕೊಡುಗೈ ದಾನಿಯಾಗಿರುವ ಸೀ ಫುಡ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಜಿ ಜಿ. ಇಬ್ರಾಹಿಂ ( ಉಂಬಾಯಿಚ್ಚ) ವಿದ್ಯಾರ್ಥಿಗಳಿಗೆ ಸುಮಾರು 12 ಸಾವಿರ ಮೌಲ್ಯದ ಪುಸ್ತಕ, ಬ್ಯಾಗ್,ಕೊಡೆ ಹಾಗೂ ಲೇಖನಿ ಸಾಮಾಗ್ರಿಗಳನ್ನು ಕೊಡುಗೆಗಯಾಗಿ ನೀಡಿದ್ದಾರೆ. ಇವರು ಹಲವಾರು ಶಾಲೆ , ಸಂಘಸಂಸ್ಥೆ, ಬಡವರಿಗೆ ಸಹಾಯ ಮಾಡಿ ಸೀ ಫುಡ್ ಉದ್ಯಮದ ಜತೆಗೆ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಶ್ವೇತಾ, ಗ್ರಾ.ಪಂ.ಸದಸ್ಯ ಶಿವಪ್ರಕಾಶ್ ಅಡ್ಡನಪಾರೆ, ಹರೀಶ್ ಅಡ್ಡನಪಾರೆ, ಎಸ್.ಡಿ.ಎಂ.ಸಿ. ಸದಸ್ಯೆ ಪ್ರಶಿತಾ ಶಿವಪ್ರಕಾಶ್ ಉಪಸ್ಥಿತರಿದ್ದರು.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…