ಗುತ್ತಿಗಾರು: ಅಚ್ರಪ್ಪಾಡಿ ಕಿ.ಪ್ರಾ.ಶಾಲೆ ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆ ಅನುಭವಿಸಿ ಮುಚ್ಚುವ ಹಂತಕ್ಕೆ ತಲುಪಿತ್ತು. ಇದನ್ನು ಮನಗಂಡ ಊರವರು ಶಾಲೆಯನ್ನು ಉಳಿಸಲು ಪ್ರಯತ್ನಿಸಿ 7 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಇಂದು 21 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.
ಇದೀಗ ಶಾಲೆಗೆ ಕೊಡುಗೈ ದಾನಿಯಾಗಿರುವ ಸೀ ಫುಡ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಜಿ ಜಿ. ಇಬ್ರಾಹಿಂ ( ಉಂಬಾಯಿಚ್ಚ) ವಿದ್ಯಾರ್ಥಿಗಳಿಗೆ ಸುಮಾರು 12 ಸಾವಿರ ಮೌಲ್ಯದ ಪುಸ್ತಕ, ಬ್ಯಾಗ್,ಕೊಡೆ ಹಾಗೂ ಲೇಖನಿ ಸಾಮಾಗ್ರಿಗಳನ್ನು ಕೊಡುಗೆಗಯಾಗಿ ನೀಡಿದ್ದಾರೆ. ಇವರು ಹಲವಾರು ಶಾಲೆ , ಸಂಘಸಂಸ್ಥೆ, ಬಡವರಿಗೆ ಸಹಾಯ ಮಾಡಿ ಸೀ ಫುಡ್ ಉದ್ಯಮದ ಜತೆಗೆ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಶ್ವೇತಾ, ಗ್ರಾ.ಪಂ.ಸದಸ್ಯ ಶಿವಪ್ರಕಾಶ್ ಅಡ್ಡನಪಾರೆ, ಹರೀಶ್ ಅಡ್ಡನಪಾರೆ, ಎಸ್.ಡಿ.ಎಂ.ಸಿ. ಸದಸ್ಯೆ ಪ್ರಶಿತಾ ಶಿವಪ್ರಕಾಶ್ ಉಪಸ್ಥಿತರಿದ್ದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…