ಗುತ್ತಿಗಾರು: ಅಚ್ರಪ್ಪಾಡಿ ಕಿ.ಪ್ರಾ.ಶಾಲೆ ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆ ಅನುಭವಿಸಿ ಮುಚ್ಚುವ ಹಂತಕ್ಕೆ ತಲುಪಿತ್ತು. ಇದನ್ನು ಮನಗಂಡ ಊರವರು ಶಾಲೆಯನ್ನು ಉಳಿಸಲು ಪ್ರಯತ್ನಿಸಿ 7 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಇಂದು 21 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.
ಇದೀಗ ಶಾಲೆಗೆ ಕೊಡುಗೈ ದಾನಿಯಾಗಿರುವ ಸೀ ಫುಡ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಜಿ ಜಿ. ಇಬ್ರಾಹಿಂ ( ಉಂಬಾಯಿಚ್ಚ) ವಿದ್ಯಾರ್ಥಿಗಳಿಗೆ ಸುಮಾರು 12 ಸಾವಿರ ಮೌಲ್ಯದ ಪುಸ್ತಕ, ಬ್ಯಾಗ್,ಕೊಡೆ ಹಾಗೂ ಲೇಖನಿ ಸಾಮಾಗ್ರಿಗಳನ್ನು ಕೊಡುಗೆಗಯಾಗಿ ನೀಡಿದ್ದಾರೆ. ಇವರು ಹಲವಾರು ಶಾಲೆ , ಸಂಘಸಂಸ್ಥೆ, ಬಡವರಿಗೆ ಸಹಾಯ ಮಾಡಿ ಸೀ ಫುಡ್ ಉದ್ಯಮದ ಜತೆಗೆ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಶ್ವೇತಾ, ಗ್ರಾ.ಪಂ.ಸದಸ್ಯ ಶಿವಪ್ರಕಾಶ್ ಅಡ್ಡನಪಾರೆ, ಹರೀಶ್ ಅಡ್ಡನಪಾರೆ, ಎಸ್.ಡಿ.ಎಂ.ಸಿ. ಸದಸ್ಯೆ ಪ್ರಶಿತಾ ಶಿವಪ್ರಕಾಶ್ ಉಪಸ್ಥಿತರಿದ್ದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…