ಮಂಗಳೂರು : ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಕೆಲಸ ಮಾಡುವ ಸಿಬಂದಿಗಳಿಗೆ ರಾಜ್ಯ ಸರಕಾರ ಗಿಫ್ಟ್ ನೀಡಿದೆ. ಈ ಬಗ್ಗೆ ಮಂಗಳೂರಿನಲ್ಲಿ ಹೇಳಿಕೆ ನೀಡಿರುವ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ , ಮುಜರಾಯಿ ಇಲಾಖಾ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಕೆಲಸ ಮಾಡುವ ಎಲ್ಲಾ ದರ್ಜೆಯ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ ಕಲ್ಪಿಸುವ ಬಗ್ಗೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದ್ದಾರೆ.
ಅರ್ಚಕರ ಮನವಿಗೆ ಸ್ಪಂದಿಸಿ ಮುಂದಿನ ದಿನಗಳಲ್ಲಿ ಐದು ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ ಮತ್ತು 10 ಲಕ್ಷ ರೂ. ಮೊತ್ತದ ಜೀವ ವಿಮೆ ನೀಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. 34 ಸಾವಿರ ದೇವಸ್ಥಾನಗಳಲ್ಲಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಅರ್ಚಕರು ಮತ್ತು ಸಿಬ್ಬಂದಿ ಇದ್ದಾರೆ. ಇಲಾಖೆ ಹೊರತಾದ ದೇವಳಗಳಿಂದ ಮನವಿ ಬಂದರೂ ಪರಿಗಣಿಸಲಾಗುವುದು ಶೀಘ್ರದಲ್ಲೇ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.