ಮಂಗಳೂರು : ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಕೆಲಸ ಮಾಡುವ ಸಿಬಂದಿಗಳಿಗೆ ರಾಜ್ಯ ಸರಕಾರ ಗಿಫ್ಟ್ ನೀಡಿದೆ. ಈ ಬಗ್ಗೆ ಮಂಗಳೂರಿನಲ್ಲಿ ಹೇಳಿಕೆ ನೀಡಿರುವ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ , ಮುಜರಾಯಿ ಇಲಾಖಾ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಕೆಲಸ ಮಾಡುವ ಎಲ್ಲಾ ದರ್ಜೆಯ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ ಕಲ್ಪಿಸುವ ಬಗ್ಗೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದ್ದಾರೆ.
ಅರ್ಚಕರ ಮನವಿಗೆ ಸ್ಪಂದಿಸಿ ಮುಂದಿನ ದಿನಗಳಲ್ಲಿ ಐದು ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ ಮತ್ತು 10 ಲಕ್ಷ ರೂ. ಮೊತ್ತದ ಜೀವ ವಿಮೆ ನೀಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. 34 ಸಾವಿರ ದೇವಸ್ಥಾನಗಳಲ್ಲಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಅರ್ಚಕರು ಮತ್ತು ಸಿಬ್ಬಂದಿ ಇದ್ದಾರೆ. ಇಲಾಖೆ ಹೊರತಾದ ದೇವಳಗಳಿಂದ ಮನವಿ ಬಂದರೂ ಪರಿಗಣಿಸಲಾಗುವುದು ಶೀಘ್ರದಲ್ಲೇ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…