ಮಂಗಳೂರು : ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಕೆಲಸ ಮಾಡುವ ಸಿಬಂದಿಗಳಿಗೆ ರಾಜ್ಯ ಸರಕಾರ ಗಿಫ್ಟ್ ನೀಡಿದೆ. ಈ ಬಗ್ಗೆ ಮಂಗಳೂರಿನಲ್ಲಿ ಹೇಳಿಕೆ ನೀಡಿರುವ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ , ಮುಜರಾಯಿ ಇಲಾಖಾ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಕೆಲಸ ಮಾಡುವ ಎಲ್ಲಾ ದರ್ಜೆಯ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ ಕಲ್ಪಿಸುವ ಬಗ್ಗೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದ್ದಾರೆ.
ಅರ್ಚಕರ ಮನವಿಗೆ ಸ್ಪಂದಿಸಿ ಮುಂದಿನ ದಿನಗಳಲ್ಲಿ ಐದು ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ ಮತ್ತು 10 ಲಕ್ಷ ರೂ. ಮೊತ್ತದ ಜೀವ ವಿಮೆ ನೀಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. 34 ಸಾವಿರ ದೇವಸ್ಥಾನಗಳಲ್ಲಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಅರ್ಚಕರು ಮತ್ತು ಸಿಬ್ಬಂದಿ ಇದ್ದಾರೆ. ಇಲಾಖೆ ಹೊರತಾದ ದೇವಳಗಳಿಂದ ಮನವಿ ಬಂದರೂ ಪರಿಗಣಿಸಲಾಗುವುದು ಶೀಘ್ರದಲ್ಲೇ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…