ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಸಂರಕ್ಷಣೆ ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕತೆಯನ್ನು ನಡೆಸಲಾಯಿತು. Malsi Tech – Fire safety solutionನ ನವೀನ್ ಶೆಣೈಯವರು ಮಾಹಿತಿ ತಿಳಿಸಿದರು. ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗವನ್ನು ಒಟ್ಟು 3 ತಂಡಗಳನ್ನಾಗಿಸಿ ಎಲ್ಲರಿಗೂ ಇದರ ಮಾಹಿತಿ ಕೊಡಲಾಯಿತು.
ಬೆಂಕಿ ಅವಘಡದ ಸಾಧ್ಯತೆಗೆ ಕಾರಣಗಳೇನು, ಅದು ದೊಡ್ಡ ಮಟ್ಟಕ್ಕೆ ಹೋಗದಂತೆ ಏನೆಲ್ಲಾ ಮಾಡಬಹುದು, ಯಾವ ಮಾದರಿಯ ಬೆಂಕಿಗೆ ಯಾವ ಎಸ್ಟಿಂಗ್ವಿಷರ್ ಬಳಸಬೇಕು, ಬಳಸುವ ಕ್ರಮ, ಬೆಂಕಿ ಅವಘಡವಾದಲ್ಲಿ ಯಾವ ರೀತಿ ರೋಲ್ ಕಾಲ್ ಮಾಡಬೇಕು ಮತ್ತು ಎಸ್ಟಿಂಗ್ವಿಷರ್ ಬಳಕೆಯ ಪ್ರಾತ್ಯಕ್ಷಿಕತೆಯನ್ನು ತಿಳಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಅವರು ಅವಘಡಗಳು ಹೇಳಿ ಬರುವುದಿಲ್ಲ. ಅವಘಡವಾದಲ್ಲಿ ನಾವು ಯಾವ ರೀತಿ ಅದನ್ನು ಎದುರಿಸಬೇಕು ಎಂಬುದನ್ನು ತಿಳಿದುಕೊಂಡಿರುವುದು ಅತ್ಯಗತ್ಯ ಎಂದರು.
ಸಂಸ್ಥೆಯ ಚೇರ್ಮೇನ್ರಾದ ಕೇಶವ ಪ್ರಸಾದ್ ಅವರು ಮಾತನಾಡಿ ಅವಘಡವಾದಲ್ಲಿ ನಾವು ಮಾನಸಿಕವಾಗಿ ಕುಗ್ಗದೆ, ನಮ್ಮನ್ನು ನಾವು ಹೇಗೆ ಸಂರಕ್ಷಿಸುವುದು, ನಮ್ಮೊಂದಿಗಿರುವವರನ್ನು ಹೇಗೆ ರಕ್ಷಿಸುವುದು ಮತ್ತು ಅದನ್ನು ಮಾಡಬೇಕಾದಲ್ಲಿ ನಮಗೆ ಬೇಕಾಗುವ ಜ್ಞಾನವನ್ನು ಈ ಮಾಹಿತಿ ಕಾರ್ಯಾಗಾರದಲ್ಲಿ ಎಲ್ಲರೂ ತಿಳಿದುಕೊಳ್ಳಬೇಕಾಗಿದೆ ಎಂದರು. ಸಂಸ್ಥೆಯ ಸುದರ್ಶನ್ ಎಮ್ ಸ್ವಾಗತಿಸಿದರು, ಲೋಕೇಶ್ ಎಮ್.ಎಸ್ ನಿರೂಪಿಸಿದರು ಹಾಗೂ ಶ್ಯಾಮ ಮೂರ್ತಿಯವರು ವಂದಿಸಿದರು.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…