Advertisement
ಕಾರ್ಯಕ್ರಮಗಳು

ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ – ಸಂರಕ್ಷಣೆ ಮಾಹಿತಿ ಕಾರ್ಯಾಗಾರ

Share

ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಸಂರಕ್ಷಣೆ ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕತೆಯನ್ನು ನಡೆಸಲಾಯಿತು. Malsi Tech – Fire safety solutionನ ನವೀನ್ ಶೆಣೈಯವರು ಮಾಹಿತಿ ತಿಳಿಸಿದರು. ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗವನ್ನು ಒಟ್ಟು 3 ತಂಡಗಳನ್ನಾಗಿಸಿ ಎಲ್ಲರಿಗೂ ಇದರ ಮಾಹಿತಿ ಕೊಡಲಾಯಿತು.

Advertisement

ಬೆಂಕಿ ಅವಘಡದ ಸಾಧ್ಯತೆಗೆ ಕಾರಣಗಳೇನು, ಅದು ದೊಡ್ಡ ಮಟ್ಟಕ್ಕೆ ಹೋಗದಂತೆ ಏನೆಲ್ಲಾ ಮಾಡಬಹುದು, ಯಾವ ಮಾದರಿಯ ಬೆಂಕಿಗೆ ಯಾವ ಎಸ್ಟಿಂಗ್ವಿಷರ್ ಬಳಸಬೇಕು, ಬಳಸುವ ಕ್ರಮ, ಬೆಂಕಿ ಅವಘಡವಾದಲ್ಲಿ ಯಾವ ರೀತಿ ರೋಲ್ ಕಾಲ್ ಮಾಡಬೇಕು ಮತ್ತು ಎಸ್ಟಿಂಗ್ವಿಷರ್ ಬಳಕೆಯ ಪ್ರಾತ್ಯಕ್ಷಿಕತೆಯನ್ನು ತಿಳಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಅವರು ಅವಘಡಗಳು ಹೇಳಿ ಬರುವುದಿಲ್ಲ. ಅವಘಡವಾದಲ್ಲಿ ನಾವು ಯಾವ ರೀತಿ ಅದನ್ನು ಎದುರಿಸಬೇಕು ಎಂಬುದನ್ನು ತಿಳಿದುಕೊಂಡಿರುವುದು ಅತ್ಯಗತ್ಯ ಎಂದರು.

ಸಂಸ್ಥೆಯ ಚೇರ್‍ಮೇನ್‍ರಾದ ಕೇಶವ ಪ್ರಸಾದ್ ಅವರು ಮಾತನಾಡಿ ಅವಘಡವಾದಲ್ಲಿ ನಾವು ಮಾನಸಿಕವಾಗಿ ಕುಗ್ಗದೆ, ನಮ್ಮನ್ನು ನಾವು ಹೇಗೆ ಸಂರಕ್ಷಿಸುವುದು, ನಮ್ಮೊಂದಿಗಿರುವವರನ್ನು ಹೇಗೆ ರಕ್ಷಿಸುವುದು ಮತ್ತು ಅದನ್ನು ಮಾಡಬೇಕಾದಲ್ಲಿ ನಮಗೆ ಬೇಕಾಗುವ ಜ್ಞಾನವನ್ನು ಈ ಮಾಹಿತಿ ಕಾರ್ಯಾಗಾರದಲ್ಲಿ ಎಲ್ಲರೂ ತಿಳಿದುಕೊಳ್ಳಬೇಕಾಗಿದೆ ಎಂದರು. ಸಂಸ್ಥೆಯ ಸುದರ್ಶನ್ ಎಮ್ ಸ್ವಾಗತಿಸಿದರು, ಲೋಕೇಶ್ ಎಮ್.ಎಸ್ ನಿರೂಪಿಸಿದರು ಹಾಗೂ ಶ್ಯಾಮ ಮೂರ್ತಿಯವರು ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

2 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

14 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago