ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಸಂರಕ್ಷಣೆ ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕತೆಯನ್ನು ನಡೆಸಲಾಯಿತು. Malsi Tech – Fire safety solutionನ ನವೀನ್ ಶೆಣೈಯವರು ಮಾಹಿತಿ ತಿಳಿಸಿದರು. ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗವನ್ನು ಒಟ್ಟು 3 ತಂಡಗಳನ್ನಾಗಿಸಿ ಎಲ್ಲರಿಗೂ ಇದರ ಮಾಹಿತಿ ಕೊಡಲಾಯಿತು.
ಬೆಂಕಿ ಅವಘಡದ ಸಾಧ್ಯತೆಗೆ ಕಾರಣಗಳೇನು, ಅದು ದೊಡ್ಡ ಮಟ್ಟಕ್ಕೆ ಹೋಗದಂತೆ ಏನೆಲ್ಲಾ ಮಾಡಬಹುದು, ಯಾವ ಮಾದರಿಯ ಬೆಂಕಿಗೆ ಯಾವ ಎಸ್ಟಿಂಗ್ವಿಷರ್ ಬಳಸಬೇಕು, ಬಳಸುವ ಕ್ರಮ, ಬೆಂಕಿ ಅವಘಡವಾದಲ್ಲಿ ಯಾವ ರೀತಿ ರೋಲ್ ಕಾಲ್ ಮಾಡಬೇಕು ಮತ್ತು ಎಸ್ಟಿಂಗ್ವಿಷರ್ ಬಳಕೆಯ ಪ್ರಾತ್ಯಕ್ಷಿಕತೆಯನ್ನು ತಿಳಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಅವರು ಅವಘಡಗಳು ಹೇಳಿ ಬರುವುದಿಲ್ಲ. ಅವಘಡವಾದಲ್ಲಿ ನಾವು ಯಾವ ರೀತಿ ಅದನ್ನು ಎದುರಿಸಬೇಕು ಎಂಬುದನ್ನು ತಿಳಿದುಕೊಂಡಿರುವುದು ಅತ್ಯಗತ್ಯ ಎಂದರು.
ಸಂಸ್ಥೆಯ ಚೇರ್ಮೇನ್ರಾದ ಕೇಶವ ಪ್ರಸಾದ್ ಅವರು ಮಾತನಾಡಿ ಅವಘಡವಾದಲ್ಲಿ ನಾವು ಮಾನಸಿಕವಾಗಿ ಕುಗ್ಗದೆ, ನಮ್ಮನ್ನು ನಾವು ಹೇಗೆ ಸಂರಕ್ಷಿಸುವುದು, ನಮ್ಮೊಂದಿಗಿರುವವರನ್ನು ಹೇಗೆ ರಕ್ಷಿಸುವುದು ಮತ್ತು ಅದನ್ನು ಮಾಡಬೇಕಾದಲ್ಲಿ ನಮಗೆ ಬೇಕಾಗುವ ಜ್ಞಾನವನ್ನು ಈ ಮಾಹಿತಿ ಕಾರ್ಯಾಗಾರದಲ್ಲಿ ಎಲ್ಲರೂ ತಿಳಿದುಕೊಳ್ಳಬೇಕಾಗಿದೆ ಎಂದರು. ಸಂಸ್ಥೆಯ ಸುದರ್ಶನ್ ಎಮ್ ಸ್ವಾಗತಿಸಿದರು, ಲೋಕೇಶ್ ಎಮ್.ಎಸ್ ನಿರೂಪಿಸಿದರು ಹಾಗೂ ಶ್ಯಾಮ ಮೂರ್ತಿಯವರು ವಂದಿಸಿದರು.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…