ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಸಂರಕ್ಷಣೆ ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕತೆಯನ್ನು ನಡೆಸಲಾಯಿತು. Malsi Tech – Fire safety solutionನ ನವೀನ್ ಶೆಣೈಯವರು ಮಾಹಿತಿ ತಿಳಿಸಿದರು. ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗವನ್ನು ಒಟ್ಟು 3 ತಂಡಗಳನ್ನಾಗಿಸಿ ಎಲ್ಲರಿಗೂ ಇದರ ಮಾಹಿತಿ ಕೊಡಲಾಯಿತು.
ಬೆಂಕಿ ಅವಘಡದ ಸಾಧ್ಯತೆಗೆ ಕಾರಣಗಳೇನು, ಅದು ದೊಡ್ಡ ಮಟ್ಟಕ್ಕೆ ಹೋಗದಂತೆ ಏನೆಲ್ಲಾ ಮಾಡಬಹುದು, ಯಾವ ಮಾದರಿಯ ಬೆಂಕಿಗೆ ಯಾವ ಎಸ್ಟಿಂಗ್ವಿಷರ್ ಬಳಸಬೇಕು, ಬಳಸುವ ಕ್ರಮ, ಬೆಂಕಿ ಅವಘಡವಾದಲ್ಲಿ ಯಾವ ರೀತಿ ರೋಲ್ ಕಾಲ್ ಮಾಡಬೇಕು ಮತ್ತು ಎಸ್ಟಿಂಗ್ವಿಷರ್ ಬಳಕೆಯ ಪ್ರಾತ್ಯಕ್ಷಿಕತೆಯನ್ನು ತಿಳಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಅವರು ಅವಘಡಗಳು ಹೇಳಿ ಬರುವುದಿಲ್ಲ. ಅವಘಡವಾದಲ್ಲಿ ನಾವು ಯಾವ ರೀತಿ ಅದನ್ನು ಎದುರಿಸಬೇಕು ಎಂಬುದನ್ನು ತಿಳಿದುಕೊಂಡಿರುವುದು ಅತ್ಯಗತ್ಯ ಎಂದರು.
ಸಂಸ್ಥೆಯ ಚೇರ್ಮೇನ್ರಾದ ಕೇಶವ ಪ್ರಸಾದ್ ಅವರು ಮಾತನಾಡಿ ಅವಘಡವಾದಲ್ಲಿ ನಾವು ಮಾನಸಿಕವಾಗಿ ಕುಗ್ಗದೆ, ನಮ್ಮನ್ನು ನಾವು ಹೇಗೆ ಸಂರಕ್ಷಿಸುವುದು, ನಮ್ಮೊಂದಿಗಿರುವವರನ್ನು ಹೇಗೆ ರಕ್ಷಿಸುವುದು ಮತ್ತು ಅದನ್ನು ಮಾಡಬೇಕಾದಲ್ಲಿ ನಮಗೆ ಬೇಕಾಗುವ ಜ್ಞಾನವನ್ನು ಈ ಮಾಹಿತಿ ಕಾರ್ಯಾಗಾರದಲ್ಲಿ ಎಲ್ಲರೂ ತಿಳಿದುಕೊಳ್ಳಬೇಕಾಗಿದೆ ಎಂದರು. ಸಂಸ್ಥೆಯ ಸುದರ್ಶನ್ ಎಮ್ ಸ್ವಾಗತಿಸಿದರು, ಲೋಕೇಶ್ ಎಮ್.ಎಸ್ ನಿರೂಪಿಸಿದರು ಹಾಗೂ ಶ್ಯಾಮ ಮೂರ್ತಿಯವರು ವಂದಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…