Advertisement
ಕಾರ್ಯಕ್ರಮಗಳು

ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ – ಸಂರಕ್ಷಣೆ ಮಾಹಿತಿ ಕಾರ್ಯಾಗಾರ

Share

ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಸಂರಕ್ಷಣೆ ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕತೆಯನ್ನು ನಡೆಸಲಾಯಿತು. Malsi Tech – Fire safety solutionನ ನವೀನ್ ಶೆಣೈಯವರು ಮಾಹಿತಿ ತಿಳಿಸಿದರು. ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗವನ್ನು ಒಟ್ಟು 3 ತಂಡಗಳನ್ನಾಗಿಸಿ ಎಲ್ಲರಿಗೂ ಇದರ ಮಾಹಿತಿ ಕೊಡಲಾಯಿತು.

Advertisement

ಬೆಂಕಿ ಅವಘಡದ ಸಾಧ್ಯತೆಗೆ ಕಾರಣಗಳೇನು, ಅದು ದೊಡ್ಡ ಮಟ್ಟಕ್ಕೆ ಹೋಗದಂತೆ ಏನೆಲ್ಲಾ ಮಾಡಬಹುದು, ಯಾವ ಮಾದರಿಯ ಬೆಂಕಿಗೆ ಯಾವ ಎಸ್ಟಿಂಗ್ವಿಷರ್ ಬಳಸಬೇಕು, ಬಳಸುವ ಕ್ರಮ, ಬೆಂಕಿ ಅವಘಡವಾದಲ್ಲಿ ಯಾವ ರೀತಿ ರೋಲ್ ಕಾಲ್ ಮಾಡಬೇಕು ಮತ್ತು ಎಸ್ಟಿಂಗ್ವಿಷರ್ ಬಳಕೆಯ ಪ್ರಾತ್ಯಕ್ಷಿಕತೆಯನ್ನು ತಿಳಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಅವರು ಅವಘಡಗಳು ಹೇಳಿ ಬರುವುದಿಲ್ಲ. ಅವಘಡವಾದಲ್ಲಿ ನಾವು ಯಾವ ರೀತಿ ಅದನ್ನು ಎದುರಿಸಬೇಕು ಎಂಬುದನ್ನು ತಿಳಿದುಕೊಂಡಿರುವುದು ಅತ್ಯಗತ್ಯ ಎಂದರು.

ಸಂಸ್ಥೆಯ ಚೇರ್‍ಮೇನ್‍ರಾದ ಕೇಶವ ಪ್ರಸಾದ್ ಅವರು ಮಾತನಾಡಿ ಅವಘಡವಾದಲ್ಲಿ ನಾವು ಮಾನಸಿಕವಾಗಿ ಕುಗ್ಗದೆ, ನಮ್ಮನ್ನು ನಾವು ಹೇಗೆ ಸಂರಕ್ಷಿಸುವುದು, ನಮ್ಮೊಂದಿಗಿರುವವರನ್ನು ಹೇಗೆ ರಕ್ಷಿಸುವುದು ಮತ್ತು ಅದನ್ನು ಮಾಡಬೇಕಾದಲ್ಲಿ ನಮಗೆ ಬೇಕಾಗುವ ಜ್ಞಾನವನ್ನು ಈ ಮಾಹಿತಿ ಕಾರ್ಯಾಗಾರದಲ್ಲಿ ಎಲ್ಲರೂ ತಿಳಿದುಕೊಳ್ಳಬೇಕಾಗಿದೆ ಎಂದರು. ಸಂಸ್ಥೆಯ ಸುದರ್ಶನ್ ಎಮ್ ಸ್ವಾಗತಿಸಿದರು, ಲೋಕೇಶ್ ಎಮ್.ಎಸ್ ನಿರೂಪಿಸಿದರು ಹಾಗೂ ಶ್ಯಾಮ ಮೂರ್ತಿಯವರು ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

10 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

11 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

21 hours ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

2 days ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

2 days ago