Advertisement
ಕಾರ್ಯಕ್ರಮಗಳು

ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ – ಸಂರಕ್ಷಣೆ ಮಾಹಿತಿ ಕಾರ್ಯಾಗಾರ

Share

ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಸಂರಕ್ಷಣೆ ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕತೆಯನ್ನು ನಡೆಸಲಾಯಿತು. Malsi Tech – Fire safety solutionನ ನವೀನ್ ಶೆಣೈಯವರು ಮಾಹಿತಿ ತಿಳಿಸಿದರು. ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗವನ್ನು ಒಟ್ಟು 3 ತಂಡಗಳನ್ನಾಗಿಸಿ ಎಲ್ಲರಿಗೂ ಇದರ ಮಾಹಿತಿ ಕೊಡಲಾಯಿತು.

ಬೆಂಕಿ ಅವಘಡದ ಸಾಧ್ಯತೆಗೆ ಕಾರಣಗಳೇನು, ಅದು ದೊಡ್ಡ ಮಟ್ಟಕ್ಕೆ ಹೋಗದಂತೆ ಏನೆಲ್ಲಾ ಮಾಡಬಹುದು, ಯಾವ ಮಾದರಿಯ ಬೆಂಕಿಗೆ ಯಾವ ಎಸ್ಟಿಂಗ್ವಿಷರ್ ಬಳಸಬೇಕು, ಬಳಸುವ ಕ್ರಮ, ಬೆಂಕಿ ಅವಘಡವಾದಲ್ಲಿ ಯಾವ ರೀತಿ ರೋಲ್ ಕಾಲ್ ಮಾಡಬೇಕು ಮತ್ತು ಎಸ್ಟಿಂಗ್ವಿಷರ್ ಬಳಕೆಯ ಪ್ರಾತ್ಯಕ್ಷಿಕತೆಯನ್ನು ತಿಳಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಅವರು ಅವಘಡಗಳು ಹೇಳಿ ಬರುವುದಿಲ್ಲ. ಅವಘಡವಾದಲ್ಲಿ ನಾವು ಯಾವ ರೀತಿ ಅದನ್ನು ಎದುರಿಸಬೇಕು ಎಂಬುದನ್ನು ತಿಳಿದುಕೊಂಡಿರುವುದು ಅತ್ಯಗತ್ಯ ಎಂದರು.

ಸಂಸ್ಥೆಯ ಚೇರ್‍ಮೇನ್‍ರಾದ ಕೇಶವ ಪ್ರಸಾದ್ ಅವರು ಮಾತನಾಡಿ ಅವಘಡವಾದಲ್ಲಿ ನಾವು ಮಾನಸಿಕವಾಗಿ ಕುಗ್ಗದೆ, ನಮ್ಮನ್ನು ನಾವು ಹೇಗೆ ಸಂರಕ್ಷಿಸುವುದು, ನಮ್ಮೊಂದಿಗಿರುವವರನ್ನು ಹೇಗೆ ರಕ್ಷಿಸುವುದು ಮತ್ತು ಅದನ್ನು ಮಾಡಬೇಕಾದಲ್ಲಿ ನಮಗೆ ಬೇಕಾಗುವ ಜ್ಞಾನವನ್ನು ಈ ಮಾಹಿತಿ ಕಾರ್ಯಾಗಾರದಲ್ಲಿ ಎಲ್ಲರೂ ತಿಳಿದುಕೊಳ್ಳಬೇಕಾಗಿದೆ ಎಂದರು. ಸಂಸ್ಥೆಯ ಸುದರ್ಶನ್ ಎಮ್ ಸ್ವಾಗತಿಸಿದರು, ಲೋಕೇಶ್ ಎಮ್.ಎಸ್ ನಿರೂಪಿಸಿದರು ಹಾಗೂ ಶ್ಯಾಮ ಮೂರ್ತಿಯವರು ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago