ಪುತ್ತೂರು : ಪ್ರತಿಷ್ಠಿತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಲರ್ಸ್ ಮತ್ತು ಶ್ರೀ ಸತ್ಯನಾರಾಯಣ ವಿದ್ಯಾ ಸಂಸ್ಥೆ ಪೆರ್ಲ ಇದರ ಸಹಯೋಗದೊಂದಿಗೆ ಪೆರ್ಲ ಶ್ರೀ ಸತ್ಯನಾರಾಯಣ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಲು ಪರಿಸರ ಸಂರಕ್ಷಣೆಯ ಬಗ್ಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸುಮಾರು 275 ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ಬಹುಮಾನಗಳನ್ನು ಪಡೆದರು.
ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಭಾಷಣದಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ರಾಜೇಂದ್ರ.ಬಿ ಮಾತನಾಡಿ ಮುಳಿಯ ಸಂಸ್ಥೆಯು ವ್ಯವಹಾರದ ಜೊತೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ ವಿಷಯವಾಗಿದೆ. ನಮ್ಮ ಸಂಸ್ಥೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ನಮಗೆ ಹೆಮ್ಮೆ ತಂದಿದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರು. ಅದಲ್ಲದೆ ಪರಿಸರದ ರಕ್ಷಣೆ ಮತ್ತು ಚಿತ್ರಕಲೆಯ ಬಗ್ಗೆ ತಮಗಿರುವ ಆಸಕ್ತಿಯನ್ನು ವಿದ್ಯಾರ್ಥಿಗಳ ಮುಂದೆ ವಿವರಿಸಿ ಪ್ರೋತ್ಸಾಹಿಸಿದರು.
ಮುಖ್ಯ ಅತಿಥಿಯಾಗಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಮಹಾಲಿಂಗೇಶ್ವರ ಭಟ್ ಮಾತನಾಡಿ ಮುಳಿಯ ಸಂಸ್ಥೆಯೊಂದಿಗಿನ ತಮ್ಮ ಒಡನಾಟದೊಂದಿಗೆ ಎಳೆಯ ವಯಸ್ಸಿನಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಪ್ರಶಂಸಿಸಿದರು.
ಮುಳಿಯ ಸಂಸ್ಥೆಯ ಸೀನಿಯರ್ ಸೇಲ್ಸ್ ಆಫೀಸರ್ ಸುಬ್ರಹ್ಮಣ್ಯ ಭಟ್ ಪ್ರ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಧ್ಯೇಯೋದ್ಧೇಶ ಹಾಗೂ ಶ್ರೀ ಸತ್ಯನಾರಾಯಣ ವಿದ್ಯಾಸಂಸ್ಥೆಯು ಚಿತ್ರಕಲಾ ಸ್ಪರ್ಧೆಯನ್ನು ಅಯೋಜಿಸಲು ಅವಕಾಶ ಮಾಡಿಕೊಟ್ಟದ್ದಕ್ಕೆ ಸಂಸ್ಥೆಯನ್ನು ಅಭಿನಂದಿಸಿದರು.
ವೇದಿಕೆಯಲ್ಲಿ ಮುಳಿಯ ಸಂಸ್ಥೆಯ ಶಾಖ ಪ್ರಬಂಧಕರಾದ ನಾಮದೇವ ಮಲ್ಯ ಹಾಗೂ ಫ್ಲೋರ್ ಮ್ಯಾನೇಜರಾದ ಆನಂದ ಕುಲಾಲ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾ ಸಂಸ್ಥೆಯ ಅಧ್ಯಾಪಕರಾದ ಕೃಷ್ಣ ಪ್ರಸಾದ್ ನಿರೂಪಿಸಿದರು. ಮುಳಿಯ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಸಂಜೀವ ಹಾಗೂ ಸಂಸ್ಥೆಯ ಉದ್ಯೋಗಿಗಳಾದ ಸ್ವಾತಿ, ಮಮಿತಾ ಹಾಗೂ ವಿದ್ಯಾಸಂಸ್ಥೆಯ ಶಿಕ್ಷಕ ವೃಂದದವರು ಸಹಕರಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…