ಸುದ್ದಿಗಳು

ಮೂರನೇ ಮಹಡಿಗೆ ಏರಿ ಪೇಚಿಗೆ ಸಿಲುಕಿದ ಶ್ವಾನ… ಅಗ್ನಿಶಾಮಕ ದಳದಿಂದ ರಕ್ಷಣೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಒಂದೊಂದೇ ಮೆಟ್ಟಿಲು ಏರಿ ಕಟ್ಟಡದ ಮೂರನೇ ಮಹಡಿ ತಲುಪಿದ ಶ್ವಾನವೊಂದು ಹಿಂತಿರುಗಿ ಬರಲಾಗದೆ  ಪೇಚಿಗೆ ಸಿಲುಕಿ ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸಿ ಶ್ವಾನವನ್ನು ಕೆಳಗಿಳಿಸಿದ ಘಟನೆ ಸುಳ್ಯ ನಗರದ ಕುರಜಿಭಾಗ್ ನಲ್ಲಿ ನಡೆದಿದೆ.

Advertisement
Advertisement

ಭಾನುವಾರ ಮಧ್ಯಾಹ್ನದ ವೇಳೆಗೆ ಶ್ವಾನವು ಕಟ್ಟಡವೊಂದರ ಮೂರನೇ ಮಹಡಿಗೆ ಏರಿದೆ. ಆದರೆ ಹೋದ ದಾರಿಯಲ್ಲಿ ಹಿಂತಿರುಗಿ ಬರಲು ಆಗದೆ ಅಲ್ಲೇ ಸಿಲುಕಿಕೊಂಡಿತು. ಕಟ್ಟಡದ ಕೋಣೆಗಳಲ್ಲಿ ವಾಸವಿದ್ದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಶ್ವಾನವನ್ನು ಓಡಿಸಲು ಮತ್ತು ಕೆಳಗಿಳಿಸಲು ಎಲ್ಲಾ ವಿದ್ಯೆಯನ್ನು ಪ್ರಯೋಗಿಸಿದರೂ ಸಾಧ್ಯವಾಗಲಿಲ್ಲ. ಈ ಮಧ್ಯೆ ಶ್ವಾನವು ಓಡಿ ತಪ್ಪಿಸಲು ಪ್ರಯತ್ನಪಟ್ಟಾಗ ಪಲ್ಟಿ ಹೊಡೆದು ಎರಡನೇ ಮಹಡಿಯ ಗೋಡೆಯ ಬದಿಯಲ್ಲಿ ಸಿಲುಕಿಕೊಂಡಿತು. ಕಟ್ಟದಲ್ಲಿದ್ದ ವಿದ್ಯಾರ್ಥಿಗಳು ಆಹಾರ ಹಾಕಿದರು ಅದನ್ನು ತಿರಸ್ಕರಿಸಿದ ಶ್ವಾನವು ಭಯಗೊಂಡು ಜೋರಾಗಿ ಬೊಗಳುತ್ತಾ‌ ಕೆಲವೊಮ್ಮೆ ಕಿರುಚಿ ನಿಂತಲ್ಲೇ ತಿರುಗುತ್ತಿತ್ತು. ಯಾರನ್ನೂ ಹತ್ತಿರ ಹೋಗಲೂ ಬಿಡುತ್ತಿರಲಿಲ್ಲ. ಬ್ರೆಡ್, ಮೀನು, ಅನ್ನ ಹಾಕಿ ನಾಯಿಯನ್ನು ಹೊರಗೆ ಸೆಳೆಯುವ ಪ್ರಯತ್ನ ನಡೆಸಿದರೂ ಅದು ಕೂಡ ವಿಫಲವಾಯಿತು. ಒಟ್ಟಿನಲ್ಲಿ ಮೂರು ನಾಲ್ಕು ಗಂಟೆಯಿಂದ ಶ್ವಾನ ಕಟ್ಟಡದಲ್ಲಿದ್ದವರಿಗೆ ತಲೆ ನೋವು ಸೃಷ್ಠಿಸಿತು.  ಶ್ವಾನದ ಮೇಲೆ ಅಲ್ಲಿದ್ದವರಿಗೆ ಪ್ರೀತಿ ಹೆಚ್ಚಾಯಿತು.  ಏನು ಮಾಡಬಹುದು ಎಂಬುದರ ಬಗ್ಗೆ   ಗಹನವಾದ ಚರ್ಚೆ ನಡೆದು ಕೊನೆಗೆ ಅಗ್ನಿಶಾಮಕದವರಿಗೆ ಸುದ್ದಿ ಮುಟ್ಟಿಸಲಾಯಿತು. ಅಗ್ನಿಶಾಮಕದ ವಾಹನವೇ ಬಂದು ಕಾರ್ಯಾಚರಣೆ ನಡೆಸಿ ಶ್ವಾನವನ್ನು ಕೆಳಗಿಸಲಾಯಿತು. ಕೋಲಿನ ಸಹಾಯದಿಂದ ಶ್ವಾನದ ಕುತ್ತಿಗೆಗೆ ಬಳ್ಳಿ ಹಾಕಿ ಕೆಳಗೆ ಇಳಿಸಲಾಯಿತು. ಮೇಲಿಂದ ಕೆಳಗೆ ಇಳಿದ ಕೂಡಲೇ ಬದುಕಿದೆ ಬಡ ಜೀವ ಎಂದು ಶ್ಚಾನ ಓಟ ಕಿತ್ತಿತ್ತು. ನಾಯಿಯ ನಾಗಲೋಟ ನೋಡಿದಾಗ ನೆರೆದವರಲ್ಲಿ ನಗು ತರಿಸಿತು.‌..!

ಅಲ್ಲಿನ ಜನರ ಶ್ವಾನ ಪ್ರೀತಿ ಮೆಚ್ಚುಗೆಗೆ ಪಾತ್ರವಾಯಿತು. ಮನುಷ್ಯ ಮಾತ್ರವಲ್ಲ ಪ್ರಾಣಿಯೂ ಈ ನೆಲದಲ್ಲಿ ಬದುಕುಬೇಕು. ಮನುಷ್ಯ ಕಾಲೆಳೆದರೆ, ಮತ್ಸರ ಕಾರಿದರೆ , ವಿಶ್ವಾಸಾರ್ಹತೆಯ ನಾಯಿ ಎಲ್ಲರಿಗೂ ಯಾವಾಗಲೂ ಪ್ರೀತಿಯೇ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

5 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

5 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

5 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

5 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

15 hours ago