Advertisement
ಸುದ್ದಿಗಳು

ಮೂರನೇ ಮಹಡಿಗೆ ಏರಿ ಪೇಚಿಗೆ ಸಿಲುಕಿದ ಶ್ವಾನ… ಅಗ್ನಿಶಾಮಕ ದಳದಿಂದ ರಕ್ಷಣೆ…!

Share

ಸುಳ್ಯ: ಒಂದೊಂದೇ ಮೆಟ್ಟಿಲು ಏರಿ ಕಟ್ಟಡದ ಮೂರನೇ ಮಹಡಿ ತಲುಪಿದ ಶ್ವಾನವೊಂದು ಹಿಂತಿರುಗಿ ಬರಲಾಗದೆ  ಪೇಚಿಗೆ ಸಿಲುಕಿ ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸಿ ಶ್ವಾನವನ್ನು ಕೆಳಗಿಳಿಸಿದ ಘಟನೆ ಸುಳ್ಯ ನಗರದ ಕುರಜಿಭಾಗ್ ನಲ್ಲಿ ನಡೆದಿದೆ.

ಭಾನುವಾರ ಮಧ್ಯಾಹ್ನದ ವೇಳೆಗೆ ಶ್ವಾನವು ಕಟ್ಟಡವೊಂದರ ಮೂರನೇ ಮಹಡಿಗೆ ಏರಿದೆ. ಆದರೆ ಹೋದ ದಾರಿಯಲ್ಲಿ ಹಿಂತಿರುಗಿ ಬರಲು ಆಗದೆ ಅಲ್ಲೇ ಸಿಲುಕಿಕೊಂಡಿತು. ಕಟ್ಟಡದ ಕೋಣೆಗಳಲ್ಲಿ ವಾಸವಿದ್ದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಶ್ವಾನವನ್ನು ಓಡಿಸಲು ಮತ್ತು ಕೆಳಗಿಳಿಸಲು ಎಲ್ಲಾ ವಿದ್ಯೆಯನ್ನು ಪ್ರಯೋಗಿಸಿದರೂ ಸಾಧ್ಯವಾಗಲಿಲ್ಲ. ಈ ಮಧ್ಯೆ ಶ್ವಾನವು ಓಡಿ ತಪ್ಪಿಸಲು ಪ್ರಯತ್ನಪಟ್ಟಾಗ ಪಲ್ಟಿ ಹೊಡೆದು ಎರಡನೇ ಮಹಡಿಯ ಗೋಡೆಯ ಬದಿಯಲ್ಲಿ ಸಿಲುಕಿಕೊಂಡಿತು. ಕಟ್ಟದಲ್ಲಿದ್ದ ವಿದ್ಯಾರ್ಥಿಗಳು ಆಹಾರ ಹಾಕಿದರು ಅದನ್ನು ತಿರಸ್ಕರಿಸಿದ ಶ್ವಾನವು ಭಯಗೊಂಡು ಜೋರಾಗಿ ಬೊಗಳುತ್ತಾ‌ ಕೆಲವೊಮ್ಮೆ ಕಿರುಚಿ ನಿಂತಲ್ಲೇ ತಿರುಗುತ್ತಿತ್ತು. ಯಾರನ್ನೂ ಹತ್ತಿರ ಹೋಗಲೂ ಬಿಡುತ್ತಿರಲಿಲ್ಲ. ಬ್ರೆಡ್, ಮೀನು, ಅನ್ನ ಹಾಕಿ ನಾಯಿಯನ್ನು ಹೊರಗೆ ಸೆಳೆಯುವ ಪ್ರಯತ್ನ ನಡೆಸಿದರೂ ಅದು ಕೂಡ ವಿಫಲವಾಯಿತು. ಒಟ್ಟಿನಲ್ಲಿ ಮೂರು ನಾಲ್ಕು ಗಂಟೆಯಿಂದ ಶ್ವಾನ ಕಟ್ಟಡದಲ್ಲಿದ್ದವರಿಗೆ ತಲೆ ನೋವು ಸೃಷ್ಠಿಸಿತು.  ಶ್ವಾನದ ಮೇಲೆ ಅಲ್ಲಿದ್ದವರಿಗೆ ಪ್ರೀತಿ ಹೆಚ್ಚಾಯಿತು.  ಏನು ಮಾಡಬಹುದು ಎಂಬುದರ ಬಗ್ಗೆ   ಗಹನವಾದ ಚರ್ಚೆ ನಡೆದು ಕೊನೆಗೆ ಅಗ್ನಿಶಾಮಕದವರಿಗೆ ಸುದ್ದಿ ಮುಟ್ಟಿಸಲಾಯಿತು. ಅಗ್ನಿಶಾಮಕದ ವಾಹನವೇ ಬಂದು ಕಾರ್ಯಾಚರಣೆ ನಡೆಸಿ ಶ್ವಾನವನ್ನು ಕೆಳಗಿಸಲಾಯಿತು. ಕೋಲಿನ ಸಹಾಯದಿಂದ ಶ್ವಾನದ ಕುತ್ತಿಗೆಗೆ ಬಳ್ಳಿ ಹಾಕಿ ಕೆಳಗೆ ಇಳಿಸಲಾಯಿತು. ಮೇಲಿಂದ ಕೆಳಗೆ ಇಳಿದ ಕೂಡಲೇ ಬದುಕಿದೆ ಬಡ ಜೀವ ಎಂದು ಶ್ಚಾನ ಓಟ ಕಿತ್ತಿತ್ತು. ನಾಯಿಯ ನಾಗಲೋಟ ನೋಡಿದಾಗ ನೆರೆದವರಲ್ಲಿ ನಗು ತರಿಸಿತು.‌..!

ಅಲ್ಲಿನ ಜನರ ಶ್ವಾನ ಪ್ರೀತಿ ಮೆಚ್ಚುಗೆಗೆ ಪಾತ್ರವಾಯಿತು. ಮನುಷ್ಯ ಮಾತ್ರವಲ್ಲ ಪ್ರಾಣಿಯೂ ಈ ನೆಲದಲ್ಲಿ ಬದುಕುಬೇಕು. ಮನುಷ್ಯ ಕಾಲೆಳೆದರೆ, ಮತ್ಸರ ಕಾರಿದರೆ , ವಿಶ್ವಾಸಾರ್ಹತೆಯ ನಾಯಿ ಎಲ್ಲರಿಗೂ ಯಾವಾಗಲೂ ಪ್ರೀತಿಯೇ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

6 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

13 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

13 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

21 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

22 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago