Advertisement
ಸುದ್ದಿಗಳು

ಮೂರನೇ ಮಹಡಿಗೆ ಏರಿ ಪೇಚಿಗೆ ಸಿಲುಕಿದ ಶ್ವಾನ… ಅಗ್ನಿಶಾಮಕ ದಳದಿಂದ ರಕ್ಷಣೆ…!

Share

ಸುಳ್ಯ: ಒಂದೊಂದೇ ಮೆಟ್ಟಿಲು ಏರಿ ಕಟ್ಟಡದ ಮೂರನೇ ಮಹಡಿ ತಲುಪಿದ ಶ್ವಾನವೊಂದು ಹಿಂತಿರುಗಿ ಬರಲಾಗದೆ  ಪೇಚಿಗೆ ಸಿಲುಕಿ ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸಿ ಶ್ವಾನವನ್ನು ಕೆಳಗಿಳಿಸಿದ ಘಟನೆ ಸುಳ್ಯ ನಗರದ ಕುರಜಿಭಾಗ್ ನಲ್ಲಿ ನಡೆದಿದೆ.

ಭಾನುವಾರ ಮಧ್ಯಾಹ್ನದ ವೇಳೆಗೆ ಶ್ವಾನವು ಕಟ್ಟಡವೊಂದರ ಮೂರನೇ ಮಹಡಿಗೆ ಏರಿದೆ. ಆದರೆ ಹೋದ ದಾರಿಯಲ್ಲಿ ಹಿಂತಿರುಗಿ ಬರಲು ಆಗದೆ ಅಲ್ಲೇ ಸಿಲುಕಿಕೊಂಡಿತು. ಕಟ್ಟಡದ ಕೋಣೆಗಳಲ್ಲಿ ವಾಸವಿದ್ದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಶ್ವಾನವನ್ನು ಓಡಿಸಲು ಮತ್ತು ಕೆಳಗಿಳಿಸಲು ಎಲ್ಲಾ ವಿದ್ಯೆಯನ್ನು ಪ್ರಯೋಗಿಸಿದರೂ ಸಾಧ್ಯವಾಗಲಿಲ್ಲ. ಈ ಮಧ್ಯೆ ಶ್ವಾನವು ಓಡಿ ತಪ್ಪಿಸಲು ಪ್ರಯತ್ನಪಟ್ಟಾಗ ಪಲ್ಟಿ ಹೊಡೆದು ಎರಡನೇ ಮಹಡಿಯ ಗೋಡೆಯ ಬದಿಯಲ್ಲಿ ಸಿಲುಕಿಕೊಂಡಿತು. ಕಟ್ಟದಲ್ಲಿದ್ದ ವಿದ್ಯಾರ್ಥಿಗಳು ಆಹಾರ ಹಾಕಿದರು ಅದನ್ನು ತಿರಸ್ಕರಿಸಿದ ಶ್ವಾನವು ಭಯಗೊಂಡು ಜೋರಾಗಿ ಬೊಗಳುತ್ತಾ‌ ಕೆಲವೊಮ್ಮೆ ಕಿರುಚಿ ನಿಂತಲ್ಲೇ ತಿರುಗುತ್ತಿತ್ತು. ಯಾರನ್ನೂ ಹತ್ತಿರ ಹೋಗಲೂ ಬಿಡುತ್ತಿರಲಿಲ್ಲ. ಬ್ರೆಡ್, ಮೀನು, ಅನ್ನ ಹಾಕಿ ನಾಯಿಯನ್ನು ಹೊರಗೆ ಸೆಳೆಯುವ ಪ್ರಯತ್ನ ನಡೆಸಿದರೂ ಅದು ಕೂಡ ವಿಫಲವಾಯಿತು. ಒಟ್ಟಿನಲ್ಲಿ ಮೂರು ನಾಲ್ಕು ಗಂಟೆಯಿಂದ ಶ್ವಾನ ಕಟ್ಟಡದಲ್ಲಿದ್ದವರಿಗೆ ತಲೆ ನೋವು ಸೃಷ್ಠಿಸಿತು.  ಶ್ವಾನದ ಮೇಲೆ ಅಲ್ಲಿದ್ದವರಿಗೆ ಪ್ರೀತಿ ಹೆಚ್ಚಾಯಿತು.  ಏನು ಮಾಡಬಹುದು ಎಂಬುದರ ಬಗ್ಗೆ   ಗಹನವಾದ ಚರ್ಚೆ ನಡೆದು ಕೊನೆಗೆ ಅಗ್ನಿಶಾಮಕದವರಿಗೆ ಸುದ್ದಿ ಮುಟ್ಟಿಸಲಾಯಿತು. ಅಗ್ನಿಶಾಮಕದ ವಾಹನವೇ ಬಂದು ಕಾರ್ಯಾಚರಣೆ ನಡೆಸಿ ಶ್ವಾನವನ್ನು ಕೆಳಗಿಸಲಾಯಿತು. ಕೋಲಿನ ಸಹಾಯದಿಂದ ಶ್ವಾನದ ಕುತ್ತಿಗೆಗೆ ಬಳ್ಳಿ ಹಾಕಿ ಕೆಳಗೆ ಇಳಿಸಲಾಯಿತು. ಮೇಲಿಂದ ಕೆಳಗೆ ಇಳಿದ ಕೂಡಲೇ ಬದುಕಿದೆ ಬಡ ಜೀವ ಎಂದು ಶ್ಚಾನ ಓಟ ಕಿತ್ತಿತ್ತು. ನಾಯಿಯ ನಾಗಲೋಟ ನೋಡಿದಾಗ ನೆರೆದವರಲ್ಲಿ ನಗು ತರಿಸಿತು.‌..!

ಅಲ್ಲಿನ ಜನರ ಶ್ವಾನ ಪ್ರೀತಿ ಮೆಚ್ಚುಗೆಗೆ ಪಾತ್ರವಾಯಿತು. ಮನುಷ್ಯ ಮಾತ್ರವಲ್ಲ ಪ್ರಾಣಿಯೂ ಈ ನೆಲದಲ್ಲಿ ಬದುಕುಬೇಕು. ಮನುಷ್ಯ ಕಾಲೆಳೆದರೆ, ಮತ್ಸರ ಕಾರಿದರೆ , ವಿಶ್ವಾಸಾರ್ಹತೆಯ ನಾಯಿ ಎಲ್ಲರಿಗೂ ಯಾವಾಗಲೂ ಪ್ರೀತಿಯೇ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

16 minutes ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

5 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

5 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

13 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

14 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago