ಮೂಲಭೂತ ಸೌಕರ್ಯದ ಕೊರತೆ : ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

May 14, 2019
11:30 AM

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಮೂರನೇ ವಾಡ್೯ ಕುದ್ಪಾಜೆ ,ನಾರಜೆ , ಕೊಡಂಕೀರಿ  ದಲಿತ ಕುಟುಂಬ ಸುಮಾರು 40 ವರ್ಷಗಳಿಂದ ವಾಸಿಸುತ್ತಿದ್ದು.ಮೂಲಭೂತ ಸೌಕರ್ಯಗಳ ಕೊರತೆಯ ಕಾರಣದಿಂದ ಈ ಬಾರಿ ನಗರ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.

ಕಾಲನಿಗ  ಕುಡಿಯುವ ನೀರು ,ಸಂಪರ್ಕ ರಸ್ತೆ ,ದಾರಿ ದೀಪ  ಇಲ್ಲ ಇದರ ಜೊತೆಗೆ ಮನೆ ಕಟ್ಟಲು ಅನುದಾನ , ಇಲ್ಲಿ ಕೆಲವು ಮನೆಗಳಗೆ ಟಾರ್ಪಲ್ ಹೊದಿಕೆ ಮಾಡಿಕೊಂಡು ವಾಸಿಸುವ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಈ ಕಾಲೋನಿಯ ನಿವಾಸಿಗಳು ಮತ್ತು ದಲಿತ ಸೇವಾ ಸಮಿತಿಯಿಂದ ಮೂಲಭೂತ ಸಮಸ್ಯೆಗಳನ್ನು ಈಡೇರಿಸಲು ಹಲವಾರು ಬಾರಿ ಮನವಿ ಮಾಡಿಕೊಂಡರು ಕೂಡ ಮೂಲಭೂತ ಸಮಸ್ಯೆಗಳು ಈಡೇರದ ಕಾರಣ ಮುಂದೆ ನಡೆಯುವ ನಗರ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧಾರಕ್ಕೆ ಬಂದಿರುತ್ತಾರೆ.

ದಲಿತ ಕಾಲೋನಿಗಳ ಬೇಟಿ ಈ ಸಂದರ್ಭದಲ್ಲಿ  ದಲಿತ್ ಸೇವಾ ಸಮಿತಿ ಸುಳ್ಯ.ತಾಲೂಕು ಅಧ್ಯಕ್ಷರು ವಸಂತ ಕುದ್ಪಾಜೆ , ತಾಲೂಕು ಸಂಚಾಲಕರು ನಾರಾಯಣ ತೋಡಿಕಾನ , ನಗರ ಸಂಚಾಲಕ ಮಧುಸೂದನ್ ಬೂಡು ,ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror