ಮೂವಪ್ಪೆ ಶಾಲಾ ನೂತನ ಕೊಠಡಿ ಉದ್ಘಾಟನೆ, ಮಕ್ಕಳ ದಿನಾಚರಣೆ

November 16, 2019
9:30 AM

ಕಾಣಿಯೂರು: ಕಾಣಿಯೂರು ಸಮೀಪದ ಮೂವಪ್ಪೆ ಕಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾ ಪಂಚಾಯತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಗ್ರಾಮ ಪಂಚಾಯತ್ ಕೊಡಿಯಾಲ ಇದರ ಅನುದಾನದಲ್ಲಿ ನಿರ್ಮಾಣಗೊಂಡ ಶಾಲಾ ನೂತನ ಕೊಠಡಿಯನ್ನು ಬೆಳ್ಳಾರೆ ಕ್ಷೇತ್ರದ ಜಿ.ಪಂ.ಸದಸ್ಯ ಮನ್ಮಥ ಎಸ್.ಎನ್.ಉದ್ಘಾಟಿಸಿದರು. ಬಳಿಕ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ಯೋಜನಾಧಿಕಾರಿ ಸಂತೋಷ್ ಮಾತನಾಡಿ ಮಕ್ಕಳಲ್ಲಿ ನಾವು ಸಂಸ್ಕಾರವನ್ನು ಬೆಳೆಸಬೇಕಾಗಿದೆ. ಜನರಲ್ಲಿ ಜಾಗೃತಿಯಾದಾಗ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.

ಸಭಾಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ವಿಠಲ ಗೌಡ ಪೋಳಾಜೆ ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕ ವಸಂತ ಏನೆಕಲ್, ಬೆಳ್ಳಾರೆ ಸಮೂಹ ಸಂಪನ್ಮೂಲ ವ್ಯಕ್ತಿ ಸವಿತ ಕುಮಾರಿ, ಕೊಡಿಯಾಲ ಗ್ರಾ.ಪಂ.ಅಧ್ಯಕ್ಷ ಮೋಹನ್ ಸಾಲಿಯಾನ್, ಶ್ರೀ ಉಳ್ಳಾಕುಲು ದೈವಸ್ಥಾನ ಕಲ್ಪಡ ಇದರ ಮೊಕ್ತೇಸರ ಶಿವರಾಮ ಉಪಾಧ್ಯಾಯ, ಕೊಡಿಯಾಲ ಗ್ರಾ.ಪಂ.ಸದಸ್ಯರಾದ ರಮಾ ಪಿ. ರೈ, ಗಣೇಶ್ ಪೆರ್ಲೋಡಿ, ಸ್ನೇಹಿತರ ಬಳಗ ಕಲ್ಪಡ ಇದರ ಅಧ್ಯಕ್ಷರಾದ ಗಣೇಶ್ ಕಲ್ಪಡ, ಶಾಲಾ ಎಸ್ ಡಿಎಂಸಿ ಉಪಾಧ್ಯಕ್ಷೆ ಚಂದ್ರಾವತಿ, ಶಾಲಾ ವಿದ್ಯಾರ್ಥಿ ನಾಯಕ ದಿಶಾಂತ್ ಉಪಸ್ಥಿತರಿದ್ದರು.

ಶಾಲಾ ಮುಖ್ಯಶಿಕ್ಷಕಿ ನಿರ್ಮಲ ಕೆ.ಎಸ್. ಸ್ವಾಗತಿಸಿ ಶಾಲಾ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ದೀಕ್ಷಾ, ಕೃಪಾಶ್ರೀ, ಕೀರ್ತನಾ, ಚಾಂದಿನಿ, ನೀಕ್ಷಾ, ಜನನಿ ಪ್ರಾರ್ಥಿಸಿದರು. ಸಹ ಶಿಕ್ಷಕಿ ಕುಮಾರಿ ಪುಷ್ಪ ಇವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. ಬಳಿಕ ಮಕ್ಕಳಿಂದ ಹಾಗೂ ಊರವರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror