Advertisement
ಸುದ್ದಿಗಳು

ಮೂವಪ್ಪೆ ಶಾಲಾ ನೂತನ ಕೊಠಡಿ ಉದ್ಘಾಟನೆ, ಮಕ್ಕಳ ದಿನಾಚರಣೆ

Share

ಕಾಣಿಯೂರು: ಕಾಣಿಯೂರು ಸಮೀಪದ ಮೂವಪ್ಪೆ ಕಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾ ಪಂಚಾಯತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಗ್ರಾಮ ಪಂಚಾಯತ್ ಕೊಡಿಯಾಲ ಇದರ ಅನುದಾನದಲ್ಲಿ ನಿರ್ಮಾಣಗೊಂಡ ಶಾಲಾ ನೂತನ ಕೊಠಡಿಯನ್ನು ಬೆಳ್ಳಾರೆ ಕ್ಷೇತ್ರದ ಜಿ.ಪಂ.ಸದಸ್ಯ ಮನ್ಮಥ ಎಸ್.ಎನ್.ಉದ್ಘಾಟಿಸಿದರು. ಬಳಿಕ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ಯೋಜನಾಧಿಕಾರಿ ಸಂತೋಷ್ ಮಾತನಾಡಿ ಮಕ್ಕಳಲ್ಲಿ ನಾವು ಸಂಸ್ಕಾರವನ್ನು ಬೆಳೆಸಬೇಕಾಗಿದೆ. ಜನರಲ್ಲಿ ಜಾಗೃತಿಯಾದಾಗ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.

ಸಭಾಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ವಿಠಲ ಗೌಡ ಪೋಳಾಜೆ ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕ ವಸಂತ ಏನೆಕಲ್, ಬೆಳ್ಳಾರೆ ಸಮೂಹ ಸಂಪನ್ಮೂಲ ವ್ಯಕ್ತಿ ಸವಿತ ಕುಮಾರಿ, ಕೊಡಿಯಾಲ ಗ್ರಾ.ಪಂ.ಅಧ್ಯಕ್ಷ ಮೋಹನ್ ಸಾಲಿಯಾನ್, ಶ್ರೀ ಉಳ್ಳಾಕುಲು ದೈವಸ್ಥಾನ ಕಲ್ಪಡ ಇದರ ಮೊಕ್ತೇಸರ ಶಿವರಾಮ ಉಪಾಧ್ಯಾಯ, ಕೊಡಿಯಾಲ ಗ್ರಾ.ಪಂ.ಸದಸ್ಯರಾದ ರಮಾ ಪಿ. ರೈ, ಗಣೇಶ್ ಪೆರ್ಲೋಡಿ, ಸ್ನೇಹಿತರ ಬಳಗ ಕಲ್ಪಡ ಇದರ ಅಧ್ಯಕ್ಷರಾದ ಗಣೇಶ್ ಕಲ್ಪಡ, ಶಾಲಾ ಎಸ್ ಡಿಎಂಸಿ ಉಪಾಧ್ಯಕ್ಷೆ ಚಂದ್ರಾವತಿ, ಶಾಲಾ ವಿದ್ಯಾರ್ಥಿ ನಾಯಕ ದಿಶಾಂತ್ ಉಪಸ್ಥಿತರಿದ್ದರು.

ಶಾಲಾ ಮುಖ್ಯಶಿಕ್ಷಕಿ ನಿರ್ಮಲ ಕೆ.ಎಸ್. ಸ್ವಾಗತಿಸಿ ಶಾಲಾ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ದೀಕ್ಷಾ, ಕೃಪಾಶ್ರೀ, ಕೀರ್ತನಾ, ಚಾಂದಿನಿ, ನೀಕ್ಷಾ, ಜನನಿ ಪ್ರಾರ್ಥಿಸಿದರು. ಸಹ ಶಿಕ್ಷಕಿ ಕುಮಾರಿ ಪುಷ್ಪ ಇವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. ಬಳಿಕ ಮಕ್ಕಳಿಂದ ಹಾಗೂ ಊರವರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

7 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

17 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

18 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

18 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

24 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago