Advertisement
ಸುದ್ದಿಗಳು

ಮೂವಪ್ಪೆ ಶಾಲಾ ನೂತನ ಕೊಠಡಿ ಉದ್ಘಾಟನೆ, ಮಕ್ಕಳ ದಿನಾಚರಣೆ

Share

ಕಾಣಿಯೂರು: ಕಾಣಿಯೂರು ಸಮೀಪದ ಮೂವಪ್ಪೆ ಕಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾ ಪಂಚಾಯತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಗ್ರಾಮ ಪಂಚಾಯತ್ ಕೊಡಿಯಾಲ ಇದರ ಅನುದಾನದಲ್ಲಿ ನಿರ್ಮಾಣಗೊಂಡ ಶಾಲಾ ನೂತನ ಕೊಠಡಿಯನ್ನು ಬೆಳ್ಳಾರೆ ಕ್ಷೇತ್ರದ ಜಿ.ಪಂ.ಸದಸ್ಯ ಮನ್ಮಥ ಎಸ್.ಎನ್.ಉದ್ಘಾಟಿಸಿದರು. ಬಳಿಕ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ಯೋಜನಾಧಿಕಾರಿ ಸಂತೋಷ್ ಮಾತನಾಡಿ ಮಕ್ಕಳಲ್ಲಿ ನಾವು ಸಂಸ್ಕಾರವನ್ನು ಬೆಳೆಸಬೇಕಾಗಿದೆ. ಜನರಲ್ಲಿ ಜಾಗೃತಿಯಾದಾಗ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.

ಸಭಾಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ವಿಠಲ ಗೌಡ ಪೋಳಾಜೆ ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕ ವಸಂತ ಏನೆಕಲ್, ಬೆಳ್ಳಾರೆ ಸಮೂಹ ಸಂಪನ್ಮೂಲ ವ್ಯಕ್ತಿ ಸವಿತ ಕುಮಾರಿ, ಕೊಡಿಯಾಲ ಗ್ರಾ.ಪಂ.ಅಧ್ಯಕ್ಷ ಮೋಹನ್ ಸಾಲಿಯಾನ್, ಶ್ರೀ ಉಳ್ಳಾಕುಲು ದೈವಸ್ಥಾನ ಕಲ್ಪಡ ಇದರ ಮೊಕ್ತೇಸರ ಶಿವರಾಮ ಉಪಾಧ್ಯಾಯ, ಕೊಡಿಯಾಲ ಗ್ರಾ.ಪಂ.ಸದಸ್ಯರಾದ ರಮಾ ಪಿ. ರೈ, ಗಣೇಶ್ ಪೆರ್ಲೋಡಿ, ಸ್ನೇಹಿತರ ಬಳಗ ಕಲ್ಪಡ ಇದರ ಅಧ್ಯಕ್ಷರಾದ ಗಣೇಶ್ ಕಲ್ಪಡ, ಶಾಲಾ ಎಸ್ ಡಿಎಂಸಿ ಉಪಾಧ್ಯಕ್ಷೆ ಚಂದ್ರಾವತಿ, ಶಾಲಾ ವಿದ್ಯಾರ್ಥಿ ನಾಯಕ ದಿಶಾಂತ್ ಉಪಸ್ಥಿತರಿದ್ದರು.

ಶಾಲಾ ಮುಖ್ಯಶಿಕ್ಷಕಿ ನಿರ್ಮಲ ಕೆ.ಎಸ್. ಸ್ವಾಗತಿಸಿ ಶಾಲಾ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ದೀಕ್ಷಾ, ಕೃಪಾಶ್ರೀ, ಕೀರ್ತನಾ, ಚಾಂದಿನಿ, ನೀಕ್ಷಾ, ಜನನಿ ಪ್ರಾರ್ಥಿಸಿದರು. ಸಹ ಶಿಕ್ಷಕಿ ಕುಮಾರಿ ಪುಷ್ಪ ಇವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. ಬಳಿಕ ಮಕ್ಕಳಿಂದ ಹಾಗೂ ಊರವರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

22 minutes ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

2 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

14 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

14 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

14 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

15 hours ago