ಸುದ್ದಿಗಳು

ಮೆಟ್ಟಿಲು ಏರುವ ಕಷ್ಟಕ್ಕೆ ಸದ್ಯದಲ್ಲೇ ತೆರೆ : ಕುರುಂಜಿ ಗುಡ್ಡೆಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕುರುಂಜಿ ಗುಡ್ಡೆಯಲ್ಲಿ ಜನರ ಮೆಟ್ಟಿಲು ಏರುವ ಕಷ್ಟಕ್ಕೆ ಇನ್ನು ತೆರೆ ಬೀಳಲಿದೆ. ಇಲ್ಲಿ ರಸ್ತೆ ಕಾಮಗಾರಿ ನಿರ್ಮಾಣಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ರಸ್ತೆ ಸಂಪರ್ಕ ಮಾಡಬೇಕೆಂಬುದು ಕುರುಂಜಿ ಗುಡ್ಡೆಯ ಬಹುಕಾಲದ ಬೇಡಿಕೆಯಾಗಿತ್ತು.

Advertisement
Advertisement

ಇಲ್ಲಿನ ಸುಮಾರು 12 ಕುಟುಂಬಗಳಿಗೆ ರಸ್ತೆ ಸಂಪರ್ಕ ಇಲ್ಲದ ಕಾರಣ ತಮ್ಮ ಮನೆ ಸೇರಲು ಮೆಟ್ಟಿಲುಗಳನ್ನೇ ಆಶ್ರಯಿಸಬೇಕಾಗಿತ್ತು.  ಇಲ್ಲಿಗೆ ರಸ್ತೆ ಸಂಪರ್ಕ ಬೇಕೆಂಬುದು ಬಹುಕಾಲದ ಬೇಡಿಕೆಯಾಗಿತ್ತು. ಕಳೆದ ನಗರ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಶಾಸಕರು ಈ ಭಾಗಕ್ಕೆ ಭೇಟಿ ನೀಡಿದಾದ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದರು. ಚುನಾವಣೆಯ ಬಳಿಕ ಸ್ಥಳೀಯ ನಗರ ಪಂಚಾಯತ್ ಸದಸ್ಯ ವಿನಯ್ ಕುಮಾರ್ ಕಂದಡ್ಕ ಅವರು ಶಾಸಕ ಎಸ್‌.ಅಂಗಾರ ಮತ್ತು ನಗರ ಪಂಚಾಯತ್ ಇಂಜಿನಿಯರ್ ಶಿವಕುಮಾರ್ ಅವರನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಸಮಸ್ಯೆಯನ್ನು ವಿವರಿಸಿದ್ದರು. ಈ ಹಿನ್ನಲೆಯಲ್ಲಿ ನ.ಪಂ ನ ಕಳೆದ ವರ್ಷದ ಬಾಕಿ ಅನುದಾನವನ್ನು ಬಳಸಿಕೊಂಡು ಇಲ್ಲಿ ಕಚ್ಚಾ ರಸ್ತೆಯ ನಿರ್ಮಾಣ ಮಾಡಲು ನಿರ್ಧರಿಸಲಾಯಿತು. ರಸ್ತೆಯ ನಿರ್ಮಾಣಕ್ಲೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನ ಪಂ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಸುಧಾಕರ, ಪೂಜಿತಾ ಶಿವಪ್ರಸಾದ್, ಮಾಜಿ ಸದಸ್ಯರಾದ ಗೋಪಾಲ ನಡುಬೈಲು, ಮೋಹಿನಿ ನಾಗರಾಜ್, ಕಿರಣ್ ಕುರುಂಜಿ, ಪ್ರಮುಖರಾದ ಶೀನಪ್ಪ ಬಯಂಬು, ಶಿವರಾಮ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

4 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

14 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

15 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

16 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

16 hours ago