ಸುಳ್ಯ: ಕುರುಂಜಿ ಗುಡ್ಡೆಯಲ್ಲಿ ಜನರ ಮೆಟ್ಟಿಲು ಏರುವ ಕಷ್ಟಕ್ಕೆ ಇನ್ನು ತೆರೆ ಬೀಳಲಿದೆ. ಇಲ್ಲಿ ರಸ್ತೆ ಕಾಮಗಾರಿ ನಿರ್ಮಾಣಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ರಸ್ತೆ ಸಂಪರ್ಕ ಮಾಡಬೇಕೆಂಬುದು ಕುರುಂಜಿ ಗುಡ್ಡೆಯ ಬಹುಕಾಲದ ಬೇಡಿಕೆಯಾಗಿತ್ತು.
ಇಲ್ಲಿನ ಸುಮಾರು 12 ಕುಟುಂಬಗಳಿಗೆ ರಸ್ತೆ ಸಂಪರ್ಕ ಇಲ್ಲದ ಕಾರಣ ತಮ್ಮ ಮನೆ ಸೇರಲು ಮೆಟ್ಟಿಲುಗಳನ್ನೇ ಆಶ್ರಯಿಸಬೇಕಾಗಿತ್ತು. ಇಲ್ಲಿಗೆ ರಸ್ತೆ ಸಂಪರ್ಕ ಬೇಕೆಂಬುದು ಬಹುಕಾಲದ ಬೇಡಿಕೆಯಾಗಿತ್ತು. ಕಳೆದ ನಗರ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಶಾಸಕರು ಈ ಭಾಗಕ್ಕೆ ಭೇಟಿ ನೀಡಿದಾದ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದರು. ಚುನಾವಣೆಯ ಬಳಿಕ ಸ್ಥಳೀಯ ನಗರ ಪಂಚಾಯತ್ ಸದಸ್ಯ ವಿನಯ್ ಕುಮಾರ್ ಕಂದಡ್ಕ ಅವರು ಶಾಸಕ ಎಸ್.ಅಂಗಾರ ಮತ್ತು ನಗರ ಪಂಚಾಯತ್ ಇಂಜಿನಿಯರ್ ಶಿವಕುಮಾರ್ ಅವರನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಸಮಸ್ಯೆಯನ್ನು ವಿವರಿಸಿದ್ದರು. ಈ ಹಿನ್ನಲೆಯಲ್ಲಿ ನ.ಪಂ ನ ಕಳೆದ ವರ್ಷದ ಬಾಕಿ ಅನುದಾನವನ್ನು ಬಳಸಿಕೊಂಡು ಇಲ್ಲಿ ಕಚ್ಚಾ ರಸ್ತೆಯ ನಿರ್ಮಾಣ ಮಾಡಲು ನಿರ್ಧರಿಸಲಾಯಿತು. ರಸ್ತೆಯ ನಿರ್ಮಾಣಕ್ಲೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನ ಪಂ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಸುಧಾಕರ, ಪೂಜಿತಾ ಶಿವಪ್ರಸಾದ್, ಮಾಜಿ ಸದಸ್ಯರಾದ ಗೋಪಾಲ ನಡುಬೈಲು, ಮೋಹಿನಿ ನಾಗರಾಜ್, ಕಿರಣ್ ಕುರುಂಜಿ, ಪ್ರಮುಖರಾದ ಶೀನಪ್ಪ ಬಯಂಬು, ಶಿವರಾಮ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…