ಸುಳ್ಯ: ಕುರುಂಜಿ ಗುಡ್ಡೆಯಲ್ಲಿ ಜನರ ಮೆಟ್ಟಿಲು ಏರುವ ಕಷ್ಟಕ್ಕೆ ಇನ್ನು ತೆರೆ ಬೀಳಲಿದೆ. ಇಲ್ಲಿ ರಸ್ತೆ ಕಾಮಗಾರಿ ನಿರ್ಮಾಣಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ರಸ್ತೆ ಸಂಪರ್ಕ ಮಾಡಬೇಕೆಂಬುದು ಕುರುಂಜಿ ಗುಡ್ಡೆಯ ಬಹುಕಾಲದ ಬೇಡಿಕೆಯಾಗಿತ್ತು.
ಇಲ್ಲಿನ ಸುಮಾರು 12 ಕುಟುಂಬಗಳಿಗೆ ರಸ್ತೆ ಸಂಪರ್ಕ ಇಲ್ಲದ ಕಾರಣ ತಮ್ಮ ಮನೆ ಸೇರಲು ಮೆಟ್ಟಿಲುಗಳನ್ನೇ ಆಶ್ರಯಿಸಬೇಕಾಗಿತ್ತು. ಇಲ್ಲಿಗೆ ರಸ್ತೆ ಸಂಪರ್ಕ ಬೇಕೆಂಬುದು ಬಹುಕಾಲದ ಬೇಡಿಕೆಯಾಗಿತ್ತು. ಕಳೆದ ನಗರ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಶಾಸಕರು ಈ ಭಾಗಕ್ಕೆ ಭೇಟಿ ನೀಡಿದಾದ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದರು. ಚುನಾವಣೆಯ ಬಳಿಕ ಸ್ಥಳೀಯ ನಗರ ಪಂಚಾಯತ್ ಸದಸ್ಯ ವಿನಯ್ ಕುಮಾರ್ ಕಂದಡ್ಕ ಅವರು ಶಾಸಕ ಎಸ್.ಅಂಗಾರ ಮತ್ತು ನಗರ ಪಂಚಾಯತ್ ಇಂಜಿನಿಯರ್ ಶಿವಕುಮಾರ್ ಅವರನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಸಮಸ್ಯೆಯನ್ನು ವಿವರಿಸಿದ್ದರು. ಈ ಹಿನ್ನಲೆಯಲ್ಲಿ ನ.ಪಂ ನ ಕಳೆದ ವರ್ಷದ ಬಾಕಿ ಅನುದಾನವನ್ನು ಬಳಸಿಕೊಂಡು ಇಲ್ಲಿ ಕಚ್ಚಾ ರಸ್ತೆಯ ನಿರ್ಮಾಣ ಮಾಡಲು ನಿರ್ಧರಿಸಲಾಯಿತು. ರಸ್ತೆಯ ನಿರ್ಮಾಣಕ್ಲೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನ ಪಂ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಸುಧಾಕರ, ಪೂಜಿತಾ ಶಿವಪ್ರಸಾದ್, ಮಾಜಿ ಸದಸ್ಯರಾದ ಗೋಪಾಲ ನಡುಬೈಲು, ಮೋಹಿನಿ ನಾಗರಾಜ್, ಕಿರಣ್ ಕುರುಂಜಿ, ಪ್ರಮುಖರಾದ ಶೀನಪ್ಪ ಬಯಂಬು, ಶಿವರಾಮ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…
ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…
ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…