ಸುಳ್ಯ: ಕುರುಂಜಿ ಗುಡ್ಡೆಯಲ್ಲಿ ಜನರ ಮೆಟ್ಟಿಲು ಏರುವ ಕಷ್ಟಕ್ಕೆ ಇನ್ನು ತೆರೆ ಬೀಳಲಿದೆ. ಇಲ್ಲಿ ರಸ್ತೆ ಕಾಮಗಾರಿ ನಿರ್ಮಾಣಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ರಸ್ತೆ ಸಂಪರ್ಕ ಮಾಡಬೇಕೆಂಬುದು ಕುರುಂಜಿ ಗುಡ್ಡೆಯ ಬಹುಕಾಲದ ಬೇಡಿಕೆಯಾಗಿತ್ತು.
ಇಲ್ಲಿನ ಸುಮಾರು 12 ಕುಟುಂಬಗಳಿಗೆ ರಸ್ತೆ ಸಂಪರ್ಕ ಇಲ್ಲದ ಕಾರಣ ತಮ್ಮ ಮನೆ ಸೇರಲು ಮೆಟ್ಟಿಲುಗಳನ್ನೇ ಆಶ್ರಯಿಸಬೇಕಾಗಿತ್ತು. ಇಲ್ಲಿಗೆ ರಸ್ತೆ ಸಂಪರ್ಕ ಬೇಕೆಂಬುದು ಬಹುಕಾಲದ ಬೇಡಿಕೆಯಾಗಿತ್ತು. ಕಳೆದ ನಗರ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಶಾಸಕರು ಈ ಭಾಗಕ್ಕೆ ಭೇಟಿ ನೀಡಿದಾದ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದರು. ಚುನಾವಣೆಯ ಬಳಿಕ ಸ್ಥಳೀಯ ನಗರ ಪಂಚಾಯತ್ ಸದಸ್ಯ ವಿನಯ್ ಕುಮಾರ್ ಕಂದಡ್ಕ ಅವರು ಶಾಸಕ ಎಸ್.ಅಂಗಾರ ಮತ್ತು ನಗರ ಪಂಚಾಯತ್ ಇಂಜಿನಿಯರ್ ಶಿವಕುಮಾರ್ ಅವರನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಸಮಸ್ಯೆಯನ್ನು ವಿವರಿಸಿದ್ದರು. ಈ ಹಿನ್ನಲೆಯಲ್ಲಿ ನ.ಪಂ ನ ಕಳೆದ ವರ್ಷದ ಬಾಕಿ ಅನುದಾನವನ್ನು ಬಳಸಿಕೊಂಡು ಇಲ್ಲಿ ಕಚ್ಚಾ ರಸ್ತೆಯ ನಿರ್ಮಾಣ ಮಾಡಲು ನಿರ್ಧರಿಸಲಾಯಿತು. ರಸ್ತೆಯ ನಿರ್ಮಾಣಕ್ಲೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನ ಪಂ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಸುಧಾಕರ, ಪೂಜಿತಾ ಶಿವಪ್ರಸಾದ್, ಮಾಜಿ ಸದಸ್ಯರಾದ ಗೋಪಾಲ ನಡುಬೈಲು, ಮೋಹಿನಿ ನಾಗರಾಜ್, ಕಿರಣ್ ಕುರುಂಜಿ, ಪ್ರಮುಖರಾದ ಶೀನಪ್ಪ ಬಯಂಬು, ಶಿವರಾಮ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…