ಸುಳ್ಯ: ಕುರುಂಜಿ ಗುಡ್ಡೆಯಲ್ಲಿ ಜನರ ಮೆಟ್ಟಿಲು ಏರುವ ಕಷ್ಟಕ್ಕೆ ಇನ್ನು ತೆರೆ ಬೀಳಲಿದೆ. ಇಲ್ಲಿ ರಸ್ತೆ ಕಾಮಗಾರಿ ನಿರ್ಮಾಣಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ರಸ್ತೆ ಸಂಪರ್ಕ ಮಾಡಬೇಕೆಂಬುದು ಕುರುಂಜಿ ಗುಡ್ಡೆಯ ಬಹುಕಾಲದ ಬೇಡಿಕೆಯಾಗಿತ್ತು.
ಇಲ್ಲಿನ ಸುಮಾರು 12 ಕುಟುಂಬಗಳಿಗೆ ರಸ್ತೆ ಸಂಪರ್ಕ ಇಲ್ಲದ ಕಾರಣ ತಮ್ಮ ಮನೆ ಸೇರಲು ಮೆಟ್ಟಿಲುಗಳನ್ನೇ ಆಶ್ರಯಿಸಬೇಕಾಗಿತ್ತು. ಇಲ್ಲಿಗೆ ರಸ್ತೆ ಸಂಪರ್ಕ ಬೇಕೆಂಬುದು ಬಹುಕಾಲದ ಬೇಡಿಕೆಯಾಗಿತ್ತು. ಕಳೆದ ನಗರ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಶಾಸಕರು ಈ ಭಾಗಕ್ಕೆ ಭೇಟಿ ನೀಡಿದಾದ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದರು. ಚುನಾವಣೆಯ ಬಳಿಕ ಸ್ಥಳೀಯ ನಗರ ಪಂಚಾಯತ್ ಸದಸ್ಯ ವಿನಯ್ ಕುಮಾರ್ ಕಂದಡ್ಕ ಅವರು ಶಾಸಕ ಎಸ್.ಅಂಗಾರ ಮತ್ತು ನಗರ ಪಂಚಾಯತ್ ಇಂಜಿನಿಯರ್ ಶಿವಕುಮಾರ್ ಅವರನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಸಮಸ್ಯೆಯನ್ನು ವಿವರಿಸಿದ್ದರು. ಈ ಹಿನ್ನಲೆಯಲ್ಲಿ ನ.ಪಂ ನ ಕಳೆದ ವರ್ಷದ ಬಾಕಿ ಅನುದಾನವನ್ನು ಬಳಸಿಕೊಂಡು ಇಲ್ಲಿ ಕಚ್ಚಾ ರಸ್ತೆಯ ನಿರ್ಮಾಣ ಮಾಡಲು ನಿರ್ಧರಿಸಲಾಯಿತು. ರಸ್ತೆಯ ನಿರ್ಮಾಣಕ್ಲೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನ ಪಂ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಸುಧಾಕರ, ಪೂಜಿತಾ ಶಿವಪ್ರಸಾದ್, ಮಾಜಿ ಸದಸ್ಯರಾದ ಗೋಪಾಲ ನಡುಬೈಲು, ಮೋಹಿನಿ ನಾಗರಾಜ್, ಕಿರಣ್ ಕುರುಂಜಿ, ಪ್ರಮುಖರಾದ ಶೀನಪ್ಪ ಬಯಂಬು, ಶಿವರಾಮ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…