ಸುಳ್ಯ: ಕುರುಂಜಿ ಗುಡ್ಡೆಯಲ್ಲಿ ಜನರ ಮೆಟ್ಟಿಲು ಏರುವ ಕಷ್ಟಕ್ಕೆ ಇನ್ನು ತೆರೆ ಬೀಳಲಿದೆ. ಇಲ್ಲಿ ರಸ್ತೆ ಕಾಮಗಾರಿ ನಿರ್ಮಾಣಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ರಸ್ತೆ ಸಂಪರ್ಕ ಮಾಡಬೇಕೆಂಬುದು ಕುರುಂಜಿ ಗುಡ್ಡೆಯ ಬಹುಕಾಲದ ಬೇಡಿಕೆಯಾಗಿತ್ತು.
ಇಲ್ಲಿನ ಸುಮಾರು 12 ಕುಟುಂಬಗಳಿಗೆ ರಸ್ತೆ ಸಂಪರ್ಕ ಇಲ್ಲದ ಕಾರಣ ತಮ್ಮ ಮನೆ ಸೇರಲು ಮೆಟ್ಟಿಲುಗಳನ್ನೇ ಆಶ್ರಯಿಸಬೇಕಾಗಿತ್ತು. ಇಲ್ಲಿಗೆ ರಸ್ತೆ ಸಂಪರ್ಕ ಬೇಕೆಂಬುದು ಬಹುಕಾಲದ ಬೇಡಿಕೆಯಾಗಿತ್ತು. ಕಳೆದ ನಗರ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಶಾಸಕರು ಈ ಭಾಗಕ್ಕೆ ಭೇಟಿ ನೀಡಿದಾದ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದರು. ಚುನಾವಣೆಯ ಬಳಿಕ ಸ್ಥಳೀಯ ನಗರ ಪಂಚಾಯತ್ ಸದಸ್ಯ ವಿನಯ್ ಕುಮಾರ್ ಕಂದಡ್ಕ ಅವರು ಶಾಸಕ ಎಸ್.ಅಂಗಾರ ಮತ್ತು ನಗರ ಪಂಚಾಯತ್ ಇಂಜಿನಿಯರ್ ಶಿವಕುಮಾರ್ ಅವರನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಸಮಸ್ಯೆಯನ್ನು ವಿವರಿಸಿದ್ದರು. ಈ ಹಿನ್ನಲೆಯಲ್ಲಿ ನ.ಪಂ ನ ಕಳೆದ ವರ್ಷದ ಬಾಕಿ ಅನುದಾನವನ್ನು ಬಳಸಿಕೊಂಡು ಇಲ್ಲಿ ಕಚ್ಚಾ ರಸ್ತೆಯ ನಿರ್ಮಾಣ ಮಾಡಲು ನಿರ್ಧರಿಸಲಾಯಿತು. ರಸ್ತೆಯ ನಿರ್ಮಾಣಕ್ಲೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನ ಪಂ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಸುಧಾಕರ, ಪೂಜಿತಾ ಶಿವಪ್ರಸಾದ್, ಮಾಜಿ ಸದಸ್ಯರಾದ ಗೋಪಾಲ ನಡುಬೈಲು, ಮೋಹಿನಿ ನಾಗರಾಜ್, ಕಿರಣ್ ಕುರುಂಜಿ, ಪ್ರಮುಖರಾದ ಶೀನಪ್ಪ ಬಯಂಬು, ಶಿವರಾಮ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…