ಸುಳ್ಯ: ಕುರುಂಜಿ ಗುಡ್ಡೆಯಲ್ಲಿ ಜನರ ಮೆಟ್ಟಿಲು ಏರುವ ಕಷ್ಟಕ್ಕೆ ಇನ್ನು ತೆರೆ ಬೀಳಲಿದೆ. ಇಲ್ಲಿ ರಸ್ತೆ ಕಾಮಗಾರಿ ನಿರ್ಮಾಣಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ರಸ್ತೆ ಸಂಪರ್ಕ ಮಾಡಬೇಕೆಂಬುದು ಕುರುಂಜಿ ಗುಡ್ಡೆಯ ಬಹುಕಾಲದ ಬೇಡಿಕೆಯಾಗಿತ್ತು.
ಇಲ್ಲಿನ ಸುಮಾರು 12 ಕುಟುಂಬಗಳಿಗೆ ರಸ್ತೆ ಸಂಪರ್ಕ ಇಲ್ಲದ ಕಾರಣ ತಮ್ಮ ಮನೆ ಸೇರಲು ಮೆಟ್ಟಿಲುಗಳನ್ನೇ ಆಶ್ರಯಿಸಬೇಕಾಗಿತ್ತು. ಇಲ್ಲಿಗೆ ರಸ್ತೆ ಸಂಪರ್ಕ ಬೇಕೆಂಬುದು ಬಹುಕಾಲದ ಬೇಡಿಕೆಯಾಗಿತ್ತು. ಕಳೆದ ನಗರ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಶಾಸಕರು ಈ ಭಾಗಕ್ಕೆ ಭೇಟಿ ನೀಡಿದಾದ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದರು. ಚುನಾವಣೆಯ ಬಳಿಕ ಸ್ಥಳೀಯ ನಗರ ಪಂಚಾಯತ್ ಸದಸ್ಯ ವಿನಯ್ ಕುಮಾರ್ ಕಂದಡ್ಕ ಅವರು ಶಾಸಕ ಎಸ್.ಅಂಗಾರ ಮತ್ತು ನಗರ ಪಂಚಾಯತ್ ಇಂಜಿನಿಯರ್ ಶಿವಕುಮಾರ್ ಅವರನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಸಮಸ್ಯೆಯನ್ನು ವಿವರಿಸಿದ್ದರು. ಈ ಹಿನ್ನಲೆಯಲ್ಲಿ ನ.ಪಂ ನ ಕಳೆದ ವರ್ಷದ ಬಾಕಿ ಅನುದಾನವನ್ನು ಬಳಸಿಕೊಂಡು ಇಲ್ಲಿ ಕಚ್ಚಾ ರಸ್ತೆಯ ನಿರ್ಮಾಣ ಮಾಡಲು ನಿರ್ಧರಿಸಲಾಯಿತು. ರಸ್ತೆಯ ನಿರ್ಮಾಣಕ್ಲೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನ ಪಂ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಸುಧಾಕರ, ಪೂಜಿತಾ ಶಿವಪ್ರಸಾದ್, ಮಾಜಿ ಸದಸ್ಯರಾದ ಗೋಪಾಲ ನಡುಬೈಲು, ಮೋಹಿನಿ ನಾಗರಾಜ್, ಕಿರಣ್ ಕುರುಂಜಿ, ಪ್ರಮುಖರಾದ ಶೀನಪ್ಪ ಬಯಂಬು, ಶಿವರಾಮ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…