ಸುಳ್ಯ:ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ವಿನೋಬನಗರ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಮೇಘಾಲಯದ ಶಿಲಾಂಗ್ ನಿವಾಸಿ ತುಬರ್ ನಾರ್ ಲಿಂಕೋಯ್ 352 ಅಂಕಗಳೊಂದಿಗೆ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ.
ಈತನಿಗೆ ಕನ್ನಡದಲ್ಲಿ 70 ಅಂಕಗಳು ಬಂದಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ವರ್ಷ ಒಂಭತ್ತನೇ ತರಗತಿಗೆ ಸೇರ್ಪಡೆಗೊಂಡ ಬಳಿಕ ಕನ್ನಡ ಅಭ್ಯಾಸ ಮಾಡಿದ್ದ. ಶಾಲೆಯ ಸಮೀಪದಲ್ಲಿಯೇ ಇರುವ ಅಡ್ಕಾರಿನ ವನವಾಸಿ ಕಲ್ಯಾಣ ವಿದ್ಯಾರ್ಥಿ ನಿಲಯದಲ್ಲಿರುವ ಈತ ಮೇಘಾಲಯದ ಶಿಪ್ ಸ್ಯಾಂಗ್ರಿಯಾನ್ ಮತ್ತು ಸ್ಪಿಮ್ ಲಿಂಕೋಯ್ ಪುತ್ರ.
ಶಾಲೆಗೆ ಉತ್ತಮ ಫಲಿತಾಂಶ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 31 ರಲ್ಲಿ 30 ಮಂದಿ ಉತ್ತೀರ್ಣರಾಗಿ ಶೇ.97 ಫಲಿತಾಂಶ ದಾಖಲಾಗಿದೆ. ನಾಲ್ಕು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು ಮೂರು ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದಾತ್ ಹೆಚ್.ಯು.(554), ಕಾರ್ತಿಕ್.ಕೆ.ವಿ.(552), ಇಂದಿರೇಶ್(548) ಅತೀ ಹೆಚ್ಚು ಅಂಕ ಪಡೆದಿದ್ದಾರೆ.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…