ಸುಳ್ಯ:ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ವಿನೋಬನಗರ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಮೇಘಾಲಯದ ಶಿಲಾಂಗ್ ನಿವಾಸಿ ತುಬರ್ ನಾರ್ ಲಿಂಕೋಯ್ 352 ಅಂಕಗಳೊಂದಿಗೆ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ.
ಈತನಿಗೆ ಕನ್ನಡದಲ್ಲಿ 70 ಅಂಕಗಳು ಬಂದಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ವರ್ಷ ಒಂಭತ್ತನೇ ತರಗತಿಗೆ ಸೇರ್ಪಡೆಗೊಂಡ ಬಳಿಕ ಕನ್ನಡ ಅಭ್ಯಾಸ ಮಾಡಿದ್ದ. ಶಾಲೆಯ ಸಮೀಪದಲ್ಲಿಯೇ ಇರುವ ಅಡ್ಕಾರಿನ ವನವಾಸಿ ಕಲ್ಯಾಣ ವಿದ್ಯಾರ್ಥಿ ನಿಲಯದಲ್ಲಿರುವ ಈತ ಮೇಘಾಲಯದ ಶಿಪ್ ಸ್ಯಾಂಗ್ರಿಯಾನ್ ಮತ್ತು ಸ್ಪಿಮ್ ಲಿಂಕೋಯ್ ಪುತ್ರ.
ಶಾಲೆಗೆ ಉತ್ತಮ ಫಲಿತಾಂಶ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 31 ರಲ್ಲಿ 30 ಮಂದಿ ಉತ್ತೀರ್ಣರಾಗಿ ಶೇ.97 ಫಲಿತಾಂಶ ದಾಖಲಾಗಿದೆ. ನಾಲ್ಕು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು ಮೂರು ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದಾತ್ ಹೆಚ್.ಯು.(554), ಕಾರ್ತಿಕ್.ಕೆ.ವಿ.(552), ಇಂದಿರೇಶ್(548) ಅತೀ ಹೆಚ್ಚು ಅಂಕ ಪಡೆದಿದ್ದಾರೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…