ಸುಳ್ಯ:ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ವಿನೋಬನಗರ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಮೇಘಾಲಯದ ಶಿಲಾಂಗ್ ನಿವಾಸಿ ತುಬರ್ ನಾರ್ ಲಿಂಕೋಯ್ 352 ಅಂಕಗಳೊಂದಿಗೆ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ.
ಈತನಿಗೆ ಕನ್ನಡದಲ್ಲಿ 70 ಅಂಕಗಳು ಬಂದಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ವರ್ಷ ಒಂಭತ್ತನೇ ತರಗತಿಗೆ ಸೇರ್ಪಡೆಗೊಂಡ ಬಳಿಕ ಕನ್ನಡ ಅಭ್ಯಾಸ ಮಾಡಿದ್ದ. ಶಾಲೆಯ ಸಮೀಪದಲ್ಲಿಯೇ ಇರುವ ಅಡ್ಕಾರಿನ ವನವಾಸಿ ಕಲ್ಯಾಣ ವಿದ್ಯಾರ್ಥಿ ನಿಲಯದಲ್ಲಿರುವ ಈತ ಮೇಘಾಲಯದ ಶಿಪ್ ಸ್ಯಾಂಗ್ರಿಯಾನ್ ಮತ್ತು ಸ್ಪಿಮ್ ಲಿಂಕೋಯ್ ಪುತ್ರ.
ಶಾಲೆಗೆ ಉತ್ತಮ ಫಲಿತಾಂಶ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 31 ರಲ್ಲಿ 30 ಮಂದಿ ಉತ್ತೀರ್ಣರಾಗಿ ಶೇ.97 ಫಲಿತಾಂಶ ದಾಖಲಾಗಿದೆ. ನಾಲ್ಕು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು ಮೂರು ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದಾತ್ ಹೆಚ್.ಯು.(554), ಕಾರ್ತಿಕ್.ಕೆ.ವಿ.(552), ಇಂದಿರೇಶ್(548) ಅತೀ ಹೆಚ್ಚು ಅಂಕ ಪಡೆದಿದ್ದಾರೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…