ಸುಳ್ಯ:ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ವಿನೋಬನಗರ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಮೇಘಾಲಯದ ಶಿಲಾಂಗ್ ನಿವಾಸಿ ತುಬರ್ ನಾರ್ ಲಿಂಕೋಯ್ 352 ಅಂಕಗಳೊಂದಿಗೆ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ.
ಈತನಿಗೆ ಕನ್ನಡದಲ್ಲಿ 70 ಅಂಕಗಳು ಬಂದಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ವರ್ಷ ಒಂಭತ್ತನೇ ತರಗತಿಗೆ ಸೇರ್ಪಡೆಗೊಂಡ ಬಳಿಕ ಕನ್ನಡ ಅಭ್ಯಾಸ ಮಾಡಿದ್ದ. ಶಾಲೆಯ ಸಮೀಪದಲ್ಲಿಯೇ ಇರುವ ಅಡ್ಕಾರಿನ ವನವಾಸಿ ಕಲ್ಯಾಣ ವಿದ್ಯಾರ್ಥಿ ನಿಲಯದಲ್ಲಿರುವ ಈತ ಮೇಘಾಲಯದ ಶಿಪ್ ಸ್ಯಾಂಗ್ರಿಯಾನ್ ಮತ್ತು ಸ್ಪಿಮ್ ಲಿಂಕೋಯ್ ಪುತ್ರ.
ಶಾಲೆಗೆ ಉತ್ತಮ ಫಲಿತಾಂಶ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 31 ರಲ್ಲಿ 30 ಮಂದಿ ಉತ್ತೀರ್ಣರಾಗಿ ಶೇ.97 ಫಲಿತಾಂಶ ದಾಖಲಾಗಿದೆ. ನಾಲ್ಕು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು ಮೂರು ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದಾತ್ ಹೆಚ್.ಯು.(554), ಕಾರ್ತಿಕ್.ಕೆ.ವಿ.(552), ಇಂದಿರೇಶ್(548) ಅತೀ ಹೆಚ್ಚು ಅಂಕ ಪಡೆದಿದ್ದಾರೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…