ಸುಳ್ಯ:ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ವಿನೋಬನಗರ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಮೇಘಾಲಯದ ಶಿಲಾಂಗ್ ನಿವಾಸಿ ತುಬರ್ ನಾರ್ ಲಿಂಕೋಯ್ 352 ಅಂಕಗಳೊಂದಿಗೆ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ.
ಈತನಿಗೆ ಕನ್ನಡದಲ್ಲಿ 70 ಅಂಕಗಳು ಬಂದಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ವರ್ಷ ಒಂಭತ್ತನೇ ತರಗತಿಗೆ ಸೇರ್ಪಡೆಗೊಂಡ ಬಳಿಕ ಕನ್ನಡ ಅಭ್ಯಾಸ ಮಾಡಿದ್ದ. ಶಾಲೆಯ ಸಮೀಪದಲ್ಲಿಯೇ ಇರುವ ಅಡ್ಕಾರಿನ ವನವಾಸಿ ಕಲ್ಯಾಣ ವಿದ್ಯಾರ್ಥಿ ನಿಲಯದಲ್ಲಿರುವ ಈತ ಮೇಘಾಲಯದ ಶಿಪ್ ಸ್ಯಾಂಗ್ರಿಯಾನ್ ಮತ್ತು ಸ್ಪಿಮ್ ಲಿಂಕೋಯ್ ಪುತ್ರ.
ಶಾಲೆಗೆ ಉತ್ತಮ ಫಲಿತಾಂಶ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 31 ರಲ್ಲಿ 30 ಮಂದಿ ಉತ್ತೀರ್ಣರಾಗಿ ಶೇ.97 ಫಲಿತಾಂಶ ದಾಖಲಾಗಿದೆ. ನಾಲ್ಕು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು ಮೂರು ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದಾತ್ ಹೆಚ್.ಯು.(554), ಕಾರ್ತಿಕ್.ಕೆ.ವಿ.(552), ಇಂದಿರೇಶ್(548) ಅತೀ ಹೆಚ್ಚು ಅಂಕ ಪಡೆದಿದ್ದಾರೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…