ಸುಳ್ಯ:ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ವಿನೋಬನಗರ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಮೇಘಾಲಯದ ಶಿಲಾಂಗ್ ನಿವಾಸಿ ತುಬರ್ ನಾರ್ ಲಿಂಕೋಯ್ 352 ಅಂಕಗಳೊಂದಿಗೆ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ.
ಈತನಿಗೆ ಕನ್ನಡದಲ್ಲಿ 70 ಅಂಕಗಳು ಬಂದಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ವರ್ಷ ಒಂಭತ್ತನೇ ತರಗತಿಗೆ ಸೇರ್ಪಡೆಗೊಂಡ ಬಳಿಕ ಕನ್ನಡ ಅಭ್ಯಾಸ ಮಾಡಿದ್ದ. ಶಾಲೆಯ ಸಮೀಪದಲ್ಲಿಯೇ ಇರುವ ಅಡ್ಕಾರಿನ ವನವಾಸಿ ಕಲ್ಯಾಣ ವಿದ್ಯಾರ್ಥಿ ನಿಲಯದಲ್ಲಿರುವ ಈತ ಮೇಘಾಲಯದ ಶಿಪ್ ಸ್ಯಾಂಗ್ರಿಯಾನ್ ಮತ್ತು ಸ್ಪಿಮ್ ಲಿಂಕೋಯ್ ಪುತ್ರ.
ಶಾಲೆಗೆ ಉತ್ತಮ ಫಲಿತಾಂಶ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 31 ರಲ್ಲಿ 30 ಮಂದಿ ಉತ್ತೀರ್ಣರಾಗಿ ಶೇ.97 ಫಲಿತಾಂಶ ದಾಖಲಾಗಿದೆ. ನಾಲ್ಕು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು ಮೂರು ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದಾತ್ ಹೆಚ್.ಯು.(554), ಕಾರ್ತಿಕ್.ಕೆ.ವಿ.(552), ಇಂದಿರೇಶ್(548) ಅತೀ ಹೆಚ್ಚು ಅಂಕ ಪಡೆದಿದ್ದಾರೆ.
ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…