ಸುಳ್ಯ:ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ವಿನೋಬನಗರ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಮೇಘಾಲಯದ ಶಿಲಾಂಗ್ ನಿವಾಸಿ ತುಬರ್ ನಾರ್ ಲಿಂಕೋಯ್ 352 ಅಂಕಗಳೊಂದಿಗೆ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ.
ಈತನಿಗೆ ಕನ್ನಡದಲ್ಲಿ 70 ಅಂಕಗಳು ಬಂದಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ವರ್ಷ ಒಂಭತ್ತನೇ ತರಗತಿಗೆ ಸೇರ್ಪಡೆಗೊಂಡ ಬಳಿಕ ಕನ್ನಡ ಅಭ್ಯಾಸ ಮಾಡಿದ್ದ. ಶಾಲೆಯ ಸಮೀಪದಲ್ಲಿಯೇ ಇರುವ ಅಡ್ಕಾರಿನ ವನವಾಸಿ ಕಲ್ಯಾಣ ವಿದ್ಯಾರ್ಥಿ ನಿಲಯದಲ್ಲಿರುವ ಈತ ಮೇಘಾಲಯದ ಶಿಪ್ ಸ್ಯಾಂಗ್ರಿಯಾನ್ ಮತ್ತು ಸ್ಪಿಮ್ ಲಿಂಕೋಯ್ ಪುತ್ರ.
ಶಾಲೆಗೆ ಉತ್ತಮ ಫಲಿತಾಂಶ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 31 ರಲ್ಲಿ 30 ಮಂದಿ ಉತ್ತೀರ್ಣರಾಗಿ ಶೇ.97 ಫಲಿತಾಂಶ ದಾಖಲಾಗಿದೆ. ನಾಲ್ಕು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು ಮೂರು ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದಾತ್ ಹೆಚ್.ಯು.(554), ಕಾರ್ತಿಕ್.ಕೆ.ವಿ.(552), ಇಂದಿರೇಶ್(548) ಅತೀ ಹೆಚ್ಚು ಅಂಕ ಪಡೆದಿದ್ದಾರೆ.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…