Advertisement
Exclusive - Mirror Hunt

ಮೇಘ ಸ್ಫೋಟ…. ಏನಿದು ? : ಸುಬ್ರಹ್ಮಣ್ಯದಲ್ಲಿ ಮೇಘ ಸ್ಫೋಟವಾಯಿತೇ ?

Share

ಆಲಿಕಲ್ಲು ಮತ್ತು ಗುಡುಗು ಸಹಿತ ಅತ್ಯಂತ ಕಡಿಮೆ ಅವಧಿಯಲ್ಲಿ ಸುರಿಯುವ ತೀವ್ರ ಸ್ವರೂಪದ ಮಳೆಯನ್ನು “ಮೇಘಸ್ಫೋಟ” (Cloud Burst) ಅಂತ ಕರೆಯುತ್ತಾರೆ. ಇದರ ಆರ್ಭಟ ಕೆಲವೇ ನಿಮಿಷಗಳಾದರೂ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣ ವಾಗುತ್ತದೆ.

ಇದಕ್ಕೇನು ಕಾರಣ ?
ಆಕಾಶದಲ್ಲಿ ಹೆಚ್ಚಿನ ಮೋಡಗಳು ಸಂಕುಚಿತಗೊಳ್ಳುವುದರಿಂದ ಮೇಘ ಸ್ಫೋಟ ಸಂಭವಿಸುತ್ತದೆ. ಬಕೆಟ್ ನಿಂದ ರಭಸವಾಗಿ ನೀರನ್ನು ಸುರಿದಂತೆ ಮೇಘಸ್ಪೋಟದಿಂದ ಒಂದು ನಿರ್ದಿಷ್ಟ ಭೂಪ್ರದೇಶದಲ್ಲಿ ಅಧಿಕ ಮಳೆಯಾಗುತ್ತದೆ. ಕೆಲವು ಸಲ 15 ಕಿ.ಮೀ.ಎತ್ತರದಿಂದ ಮಳೆ ಸುರಿಯುತ್ತದೆ. ಅದರ ಪ್ರಮಾಣ ಗಂಟೆಗೆ 100 ಮಿ.ಮೀ.ಗೂ (3.94 ಇಂಚು) ಅಧಿಕ. ಮೇಘಸ್ಪೋಟದಿಂದ ಕೆಲವೇ ನಿಮಿಷಗಳಲ್ಲಿ 20 ಮಿ.ಮೀ.ಗೂ ಅಧಿಕ ಮಳೆ ಸುರಿಯುತ್ತದೆ. ಅವಧಿ ಕಡಿಮೆಯಾದರೂ ಹಾನಿ ಅಪಾರ.

 

ಎಲ್ಲೆಲ್ಲಿ… ಯಾವಾಗ ?1906 ಆಗಸ್ಟ್ 24 ರಂದು ಅಮೇರಿಕಾದ ವರ್ಜೀನಿಯಾದಲ್ಲಿ 40 ನಿಮಿಷಗಳ ಮೇಘಸ್ಫೋಟ ಸಂಭವಿಸಿತ್ತು. ಆ ಪರಿಣಾಮ 234.95 ಮಿ.ಮೀ.ಮಳೆ ದಾಖಲಾಗಿತ್ತು. ರುಮೇನಿಯಾ, ಜಮೈಕಾ, ಪನಾಮಾ, ಹಾಗೂ ನಮ್ಮ ದೇಶದಲ್ಲೂ ಮೇಘಸ್ಫೋಟಗಳ ಅಬ್ಬರ ಇದ್ದೇ ಇದೆ. ಹಿಮಾಚಲ ಪ್ರದೇಶದ ಬರೋತ್ ನಲ್ಲಿ 1970 ರ ನವಂಬರ್ 26 ರಂದು ಒಂದು ನಿಮಿಷದಲ್ಲಿ ಅವಧಿಯಲ್ಲಿ 38.10 ಮಿ.ಮೀ.ಮಳೆ ಸುರಿದಿತ್ತು.! ಉತ್ತರಾಂಚಲದಲ್ಲಿ 2002 ರಲ್ಲಿ ಮೇಘಸ್ಫೋಟ 28 ಮಂದಿಯನ್ನು ಬಲಿ ಪಡೆದಿತ್ತು.
ಮೇಘಸ್ಫೋಟದಿಂದಾಗಿಯೇ 2005 ರ ಜುಲೈ 26 ರಂದು ಮುಂಬಯಿ ಅಕ್ಷರಷಹ ದ್ವೀಪವಾಗಿ ಪರಿವರ್ತಿತವಾಗಿತ್ತು. ವಾಣಿಜ್ಯ ನಗರಿ ಯಲ್ಲಿ ಅಂದು 8 ರಿಂದ ಹತ್ತು ಗಂಟೆಗಳಲ್ಲಿ ಸುರಿದ ಮಳೆ 950 ಮಿ.ಮೀ.! 500 ಕ್ಕೂ ಅಧಿಕ ಮಂದಿ ಪ್ರವಾಹಕ್ಕೆ ಬಲಿಯಾಗಿದ್ದರು.

 

1910 ಜುಲೈ 12 ರಂದು ಚಿರಾಪುಂಜಿಯಲ್ಲಿ ಒಂದು ದಿನದ ಅವಧಿಯಲ್ಲಿ ದಾಖಲಾದ 83.82 ಮಿ.ಮೀ.ಮಳೆ ಆವರೆಗಿನ ದಾಖಲೆಯಾಗಿತ್ತು. ಮುಂಗಾರಿನ ಮಳೆಯ ಸಮಯದಲ್ಲಿ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟಗಳು ಸಾಮಾನ್ಯ. ಪರ್ವತ ಪ್ರದೇಶಗಳಲ್ಲಿ ಮೇಘಸ್ಫೋಟದ ಪ್ರಮಾಣ ಹೆಚ್ಚು. ಬಹುಶಃ ಕಳೆದ ವರ್ಷದ ಕೊಡಗಿನ ಮಳೆ, ಈ ವರ್ಷ ಚಾರ್ಮಾಡಿ ಘಾಟ್ ಪ್ರದೇಶ, ನಿನ್ನೆ ಸುಬ್ರಹ್ಮಣ್ಯ ಪರಿಸರದಲ್ಲಿ ಸುರಿದ ಅಪಾರ ಪ್ರಮಾಣದ ಮಳೆ ಮೇಘಸ್ಪೋಟದ ಪರಿಣಾಮವೇ ಇರಬಹುದು. ದಟ್ಟ ಕಾನನದ ನಡುವೆ ಸುರಿಯುವ ಮಳೆ ನಮ್ಮ ಲೆಕ್ಕಕ್ಕೆ ಸಿಗದು

ಈ ಸಂದರ್ಭದಲ್ಲಿ ವರಕವಿ ದ.ರಾ.ಬೇಂದ್ರೆಯವರ ಕವನದ ಸಾಲುಗಳು ನೆನಪಿಗೆ ಬಂದವು…

ಗುಡ್ಡ ಗುಡ್ಡ ಸ್ಥಾವರ ಲಿಂಗ
ಅದಕಭ್ಯಂಗ ಎರಿತಾವನ್ನೋ ಹಂಗ
ಕೂಡ್ಯಾವ ಮೋಡ ಸುತ್ತಲೂ ನೋಡ ನೋಡ…

  – ಪಿ ಜಿ ಎಸ್ ಎನ್ ಪ್ರಸಾದ್ , ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

10 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

18 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago