ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಂಗ ಘಟಕ ಕುಸುಮಸಾರಂಗದ ರಂಗಶಿಕ್ಷಣ ಶಿಭಿರದ ಉದ್ಘಾಟನಾ ಸಮಾರಂಭವು ಮೇ.19 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ತಿಳಿಸಿದ್ದಾರೆ.
ಮಂಗಳೂರು ಮಂಗಳಗಂಗೋತ್ರಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಪ್ರೋ ವೇದವ ಪಿ ಅವರು ರಂಗ ಶಿಬಿರವನ್ನು ಉದ್ಘಾಟಿಸುವರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ, ಶಿಬಿರ ನಿರ್ದೇಶಕ ದಾಕ್ಷಾಯಿಣಿ ಭಟ್, ಕುಸುಮಸಾರಂಗ ರಂಗ ಘಟಕದ ಸಂಚಾಲಕ ಡಾ. ಗೋವಿಂದ ಎನ್.ಎಸ್, ಕುಸುಮಸಾರಂಗದ ಪೂರ್ವ ನಿರ್ದೇಶಕ ತುಕರಾಮ ಯೇನೆಕಲ್ಲು, ರಂಗಕರ್ಮಿ ಜಯಪ್ರಕಾಶ ಬಿಳಿನೆಲೆ, ವಿದ್ಯಾರ್ಥಿ ರಾಮಚಂದ್ರ, ಉಪನ್ಯಾಸಕರಾದ ಪುಷ್ಪಾ ಡಿ, ವಿನ್ಯಾಸ್ ಎಚ್, ವಿದ್ಯಾರ್ಥಿನಿ ಮಮತಾ.ಎ ಉಪಸ್ಥಿತರಿರುವರು ಎಂದು ಅವರು ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…