ಮೇ.21 : ಬಾಳಿಲದಲ್ಲಿ ವಿದ್ಯುತ್ ಗ್ರಾಹಕರ ಸಮಾವೇಶ

May 11, 2019
1:44 PM

ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಬೆಳ್ಳಾರೆ ವಿದ್ಯುತ್ ಸಬ್ ಸ್ಟೇಶನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶ ಮೇ.21 ರಂದು ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ಗಂಟೆಯ ನಡೆಯಲಿದೆ ಎಂದು ಭಾಕಿಸಂ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

ಕಳೆದ ಡಿಸೆಂಬರ್ ನಂತರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ತೋಟಕ್ಕೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಒಂದು ಕಡೆ ಲೋವೋಲ್ಟೇಜ್ ಸಮಸ್ಯೆ  ಇನ್ನೊಂದು ಕಡೆ ಗುಣಮಟ್ಟ ವಿದ್ಯುತ್ ಇಲ್ಲದ ಸಮಸ್ಯೆ.  ಇದೆರಡೂ ಕೃಷಿಕರಿಗೆ , ಉದ್ಯಮಿಗಳಿಗೆ ತೀರಾ ಸಮಸ್ಯೆಯಾಗಿದೆ. ಇತರ ಜಿಲ್ಲೆ, ತಾಲೂಕುಗಳಿಗೆ ಹೋಲಿಸಿದರೆ ಇಂತಹ ಸಮಸ್ಯೆ ಅಲ್ಲಿ ಇಲ್ಲವಾಗಿದೆ. ಇಲ್ಲಿನ ಸಮಸ್ಯೆಗೆ  ಮುಖ್ಯ ಕಾರಣ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಕೆಲಸ ಆಗದೇ ಇರುವುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಸಬ್ ಸ್ಟೇಶನ್  ಕೆಲಸ ಶೇ.90 ಮುಗಿದರೂ ನಂತರದ ಕೆಲಸ ಸ್ಥಗಿತವಾಗಿದೆ. ಕುಂಬ್ರ ಸಬ್ ಸ್ಟೇಶನ್ ಕೆಲಸವೂ ಪೂರ್ತಿಯಾಗಿಲ್ಲ. ಹೀಗಾಗಿ ಎರಡೂ ಕೆಲಸಗಳು  ತಕ್ಷಣವೇ  ಆರಂಭವಾಗಬೇಕು , ಮುಂದಿನ ಅವಧಿಗೆ ಈ ಸಮಸ್ಯೆ ನಿವಾರಣೆಯಾಗಬೇಕು ಎಂದು ಬಳಕೆದಾರರು ಎಲ್ಲರೂ ಒಂದಾಗಿ ಒತ್ತಾಯಿಸಬೇಕಿದೆ ಎಂದು ಪ್ರಕಟಣೆಯಲ್ಲಿ  ಭಾರತೀಯ ಕಿಸಾನ್ ಸಂಘ ತಿಳಿಸಿದೆ.

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group