ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಬೆಳ್ಳಾರೆ ವಿದ್ಯುತ್ ಸಬ್ ಸ್ಟೇಶನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶ ಮೇ.21 ರಂದು ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ಗಂಟೆಯ ನಡೆಯಲಿದೆ ಎಂದು ಭಾಕಿಸಂ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಡಿಸೆಂಬರ್ ನಂತರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ತೋಟಕ್ಕೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಒಂದು ಕಡೆ ಲೋವೋಲ್ಟೇಜ್ ಸಮಸ್ಯೆ ಇನ್ನೊಂದು ಕಡೆ ಗುಣಮಟ್ಟ ವಿದ್ಯುತ್ ಇಲ್ಲದ ಸಮಸ್ಯೆ. ಇದೆರಡೂ ಕೃಷಿಕರಿಗೆ , ಉದ್ಯಮಿಗಳಿಗೆ ತೀರಾ ಸಮಸ್ಯೆಯಾಗಿದೆ. ಇತರ ಜಿಲ್ಲೆ, ತಾಲೂಕುಗಳಿಗೆ ಹೋಲಿಸಿದರೆ ಇಂತಹ ಸಮಸ್ಯೆ ಅಲ್ಲಿ ಇಲ್ಲವಾಗಿದೆ. ಇಲ್ಲಿನ ಸಮಸ್ಯೆಗೆ ಮುಖ್ಯ ಕಾರಣ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಕೆಲಸ ಆಗದೇ ಇರುವುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಸಬ್ ಸ್ಟೇಶನ್ ಕೆಲಸ ಶೇ.90 ಮುಗಿದರೂ ನಂತರದ ಕೆಲಸ ಸ್ಥಗಿತವಾಗಿದೆ. ಕುಂಬ್ರ ಸಬ್ ಸ್ಟೇಶನ್ ಕೆಲಸವೂ ಪೂರ್ತಿಯಾಗಿಲ್ಲ. ಹೀಗಾಗಿ ಎರಡೂ ಕೆಲಸಗಳು ತಕ್ಷಣವೇ ಆರಂಭವಾಗಬೇಕು , ಮುಂದಿನ ಅವಧಿಗೆ ಈ ಸಮಸ್ಯೆ ನಿವಾರಣೆಯಾಗಬೇಕು ಎಂದು ಬಳಕೆದಾರರು ಎಲ್ಲರೂ ಒಂದಾಗಿ ಒತ್ತಾಯಿಸಬೇಕಿದೆ ಎಂದು ಪ್ರಕಟಣೆಯಲ್ಲಿ ಭಾರತೀಯ ಕಿಸಾನ್ ಸಂಘ ತಿಳಿಸಿದೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…