ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಬೆಳ್ಳಾರೆ ವಿದ್ಯುತ್ ಸಬ್ ಸ್ಟೇಶನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶ ಮೇ.21 ರಂದು ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ಗಂಟೆಯ ನಡೆಯಲಿದೆ ಎಂದು ಭಾಕಿಸಂ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಡಿಸೆಂಬರ್ ನಂತರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ತೋಟಕ್ಕೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಒಂದು ಕಡೆ ಲೋವೋಲ್ಟೇಜ್ ಸಮಸ್ಯೆ ಇನ್ನೊಂದು ಕಡೆ ಗುಣಮಟ್ಟ ವಿದ್ಯುತ್ ಇಲ್ಲದ ಸಮಸ್ಯೆ. ಇದೆರಡೂ ಕೃಷಿಕರಿಗೆ , ಉದ್ಯಮಿಗಳಿಗೆ ತೀರಾ ಸಮಸ್ಯೆಯಾಗಿದೆ. ಇತರ ಜಿಲ್ಲೆ, ತಾಲೂಕುಗಳಿಗೆ ಹೋಲಿಸಿದರೆ ಇಂತಹ ಸಮಸ್ಯೆ ಅಲ್ಲಿ ಇಲ್ಲವಾಗಿದೆ. ಇಲ್ಲಿನ ಸಮಸ್ಯೆಗೆ ಮುಖ್ಯ ಕಾರಣ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಕೆಲಸ ಆಗದೇ ಇರುವುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಸಬ್ ಸ್ಟೇಶನ್ ಕೆಲಸ ಶೇ.90 ಮುಗಿದರೂ ನಂತರದ ಕೆಲಸ ಸ್ಥಗಿತವಾಗಿದೆ. ಕುಂಬ್ರ ಸಬ್ ಸ್ಟೇಶನ್ ಕೆಲಸವೂ ಪೂರ್ತಿಯಾಗಿಲ್ಲ. ಹೀಗಾಗಿ ಎರಡೂ ಕೆಲಸಗಳು ತಕ್ಷಣವೇ ಆರಂಭವಾಗಬೇಕು , ಮುಂದಿನ ಅವಧಿಗೆ ಈ ಸಮಸ್ಯೆ ನಿವಾರಣೆಯಾಗಬೇಕು ಎಂದು ಬಳಕೆದಾರರು ಎಲ್ಲರೂ ಒಂದಾಗಿ ಒತ್ತಾಯಿಸಬೇಕಿದೆ ಎಂದು ಪ್ರಕಟಣೆಯಲ್ಲಿ ಭಾರತೀಯ ಕಿಸಾನ್ ಸಂಘ ತಿಳಿಸಿದೆ.
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…