ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಬೆಳ್ಳಾರೆ ವಿದ್ಯುತ್ ಸಬ್ ಸ್ಟೇಶನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶ ಮೇ.21 ರಂದು ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ಗಂಟೆಯ ನಡೆಯಲಿದೆ ಎಂದು ಭಾಕಿಸಂ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಡಿಸೆಂಬರ್ ನಂತರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ತೋಟಕ್ಕೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಒಂದು ಕಡೆ ಲೋವೋಲ್ಟೇಜ್ ಸಮಸ್ಯೆ ಇನ್ನೊಂದು ಕಡೆ ಗುಣಮಟ್ಟ ವಿದ್ಯುತ್ ಇಲ್ಲದ ಸಮಸ್ಯೆ. ಇದೆರಡೂ ಕೃಷಿಕರಿಗೆ , ಉದ್ಯಮಿಗಳಿಗೆ ತೀರಾ ಸಮಸ್ಯೆಯಾಗಿದೆ. ಇತರ ಜಿಲ್ಲೆ, ತಾಲೂಕುಗಳಿಗೆ ಹೋಲಿಸಿದರೆ ಇಂತಹ ಸಮಸ್ಯೆ ಅಲ್ಲಿ ಇಲ್ಲವಾಗಿದೆ. ಇಲ್ಲಿನ ಸಮಸ್ಯೆಗೆ ಮುಖ್ಯ ಕಾರಣ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಕೆಲಸ ಆಗದೇ ಇರುವುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಸಬ್ ಸ್ಟೇಶನ್ ಕೆಲಸ ಶೇ.90 ಮುಗಿದರೂ ನಂತರದ ಕೆಲಸ ಸ್ಥಗಿತವಾಗಿದೆ. ಕುಂಬ್ರ ಸಬ್ ಸ್ಟೇಶನ್ ಕೆಲಸವೂ ಪೂರ್ತಿಯಾಗಿಲ್ಲ. ಹೀಗಾಗಿ ಎರಡೂ ಕೆಲಸಗಳು ತಕ್ಷಣವೇ ಆರಂಭವಾಗಬೇಕು , ಮುಂದಿನ ಅವಧಿಗೆ ಈ ಸಮಸ್ಯೆ ನಿವಾರಣೆಯಾಗಬೇಕು ಎಂದು ಬಳಕೆದಾರರು ಎಲ್ಲರೂ ಒಂದಾಗಿ ಒತ್ತಾಯಿಸಬೇಕಿದೆ ಎಂದು ಪ್ರಕಟಣೆಯಲ್ಲಿ ಭಾರತೀಯ ಕಿಸಾನ್ ಸಂಘ ತಿಳಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…