ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಬೆಳ್ಳಾರೆ ವಿದ್ಯುತ್ ಸಬ್ ಸ್ಟೇಶನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶ ಮೇ.21 ರಂದು ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ಗಂಟೆಯ ನಡೆಯಲಿದೆ ಎಂದು ಭಾಕಿಸಂ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಡಿಸೆಂಬರ್ ನಂತರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ತೋಟಕ್ಕೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಒಂದು ಕಡೆ ಲೋವೋಲ್ಟೇಜ್ ಸಮಸ್ಯೆ ಇನ್ನೊಂದು ಕಡೆ ಗುಣಮಟ್ಟ ವಿದ್ಯುತ್ ಇಲ್ಲದ ಸಮಸ್ಯೆ. ಇದೆರಡೂ ಕೃಷಿಕರಿಗೆ , ಉದ್ಯಮಿಗಳಿಗೆ ತೀರಾ ಸಮಸ್ಯೆಯಾಗಿದೆ. ಇತರ ಜಿಲ್ಲೆ, ತಾಲೂಕುಗಳಿಗೆ ಹೋಲಿಸಿದರೆ ಇಂತಹ ಸಮಸ್ಯೆ ಅಲ್ಲಿ ಇಲ್ಲವಾಗಿದೆ. ಇಲ್ಲಿನ ಸಮಸ್ಯೆಗೆ ಮುಖ್ಯ ಕಾರಣ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಕೆಲಸ ಆಗದೇ ಇರುವುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಸಬ್ ಸ್ಟೇಶನ್ ಕೆಲಸ ಶೇ.90 ಮುಗಿದರೂ ನಂತರದ ಕೆಲಸ ಸ್ಥಗಿತವಾಗಿದೆ. ಕುಂಬ್ರ ಸಬ್ ಸ್ಟೇಶನ್ ಕೆಲಸವೂ ಪೂರ್ತಿಯಾಗಿಲ್ಲ. ಹೀಗಾಗಿ ಎರಡೂ ಕೆಲಸಗಳು ತಕ್ಷಣವೇ ಆರಂಭವಾಗಬೇಕು , ಮುಂದಿನ ಅವಧಿಗೆ ಈ ಸಮಸ್ಯೆ ನಿವಾರಣೆಯಾಗಬೇಕು ಎಂದು ಬಳಕೆದಾರರು ಎಲ್ಲರೂ ಒಂದಾಗಿ ಒತ್ತಾಯಿಸಬೇಕಿದೆ ಎಂದು ಪ್ರಕಟಣೆಯಲ್ಲಿ ಭಾರತೀಯ ಕಿಸಾನ್ ಸಂಘ ತಿಳಿಸಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…