ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಬೆಳ್ಳಾರೆ ವಿದ್ಯುತ್ ಸಬ್ ಸ್ಟೇಶನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶ ಮೇ.21 ರಂದು ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ಗಂಟೆಯ ನಡೆಯಲಿದೆ ಎಂದು ಭಾಕಿಸಂ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಡಿಸೆಂಬರ್ ನಂತರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ತೋಟಕ್ಕೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಒಂದು ಕಡೆ ಲೋವೋಲ್ಟೇಜ್ ಸಮಸ್ಯೆ ಇನ್ನೊಂದು ಕಡೆ ಗುಣಮಟ್ಟ ವಿದ್ಯುತ್ ಇಲ್ಲದ ಸಮಸ್ಯೆ. ಇದೆರಡೂ ಕೃಷಿಕರಿಗೆ , ಉದ್ಯಮಿಗಳಿಗೆ ತೀರಾ ಸಮಸ್ಯೆಯಾಗಿದೆ. ಇತರ ಜಿಲ್ಲೆ, ತಾಲೂಕುಗಳಿಗೆ ಹೋಲಿಸಿದರೆ ಇಂತಹ ಸಮಸ್ಯೆ ಅಲ್ಲಿ ಇಲ್ಲವಾಗಿದೆ. ಇಲ್ಲಿನ ಸಮಸ್ಯೆಗೆ ಮುಖ್ಯ ಕಾರಣ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಕೆಲಸ ಆಗದೇ ಇರುವುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಸಬ್ ಸ್ಟೇಶನ್ ಕೆಲಸ ಶೇ.90 ಮುಗಿದರೂ ನಂತರದ ಕೆಲಸ ಸ್ಥಗಿತವಾಗಿದೆ. ಕುಂಬ್ರ ಸಬ್ ಸ್ಟೇಶನ್ ಕೆಲಸವೂ ಪೂರ್ತಿಯಾಗಿಲ್ಲ. ಹೀಗಾಗಿ ಎರಡೂ ಕೆಲಸಗಳು ತಕ್ಷಣವೇ ಆರಂಭವಾಗಬೇಕು , ಮುಂದಿನ ಅವಧಿಗೆ ಈ ಸಮಸ್ಯೆ ನಿವಾರಣೆಯಾಗಬೇಕು ಎಂದು ಬಳಕೆದಾರರು ಎಲ್ಲರೂ ಒಂದಾಗಿ ಒತ್ತಾಯಿಸಬೇಕಿದೆ ಎಂದು ಪ್ರಕಟಣೆಯಲ್ಲಿ ಭಾರತೀಯ ಕಿಸಾನ್ ಸಂಘ ತಿಳಿಸಿದೆ.
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.